Putturu: ವಿಷಪದಾರ್ಥ ಸೇವಿಸಿ ಮೃತ
Friday, December 29, 2023
ಪುತ್ತೂರು: ಸೆಲೂನ್ ಮಾಲಕರೊಬ್ಬರು ವಿಷಪದಾರ್ಥ ಸೇವಿಸಿ ಮೃತಪಟ್ಟ ಘಟನೆ ಪುತ್ತೂರಿನ ನೈತ್ತಾಡಿ ಎಂಬಲ್ಲಿ ನಡೆದಿದೆ. ಆರ್ಯಾಪು ಗ್ರಾಮದ ಕಾರ್ಪಾಡಿ ನಿವಾಸಿಯಾಗಿರುವ ರತ್ನಾಕರ ಬಂಡಾರಿ ಅವರು ನೈತ್ತಾಡಿಯ ಕಲ್ಲುಗುಡ್ಡೆ ಎಂಬಲ್ಲಿ ಸೆಲೂನ್ ನಡೆಸುತ್ತಿದ್ದು, ಗುರುವಾರ ವಿಷಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂಧಿಸದೆ ತಡ ರಾತ್ರಿ ಮೃತಪಟ್ಟಿದ್ದಾರೆ.