Mangalore: ಕಾಶೀಮಠದಿಂದ ಅಯೋಧ್ಯೆ ಶ್ರೀರಾಮನಿಗೆ ವಿಶೇಷ ಸ್ವರ್ಣ ಹಾರ
Sunday, January 21, 2024
ಮಂಗಳೂರು: ಕಾಶೀಮಠಾಧೀಶರಾದ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿ ಅವರು ಕಾಶೀಮಠದ ವತಿಯಿಂದ ಅಯೋಧ್ಯೆ ಶ್ರೀರಾಮದೇವರಿಗೆ ಸುಮಾರು 25 ಲಕ್ಷ ರೂ. ಮೌಲ್ಯದ 400 ಗ್ರಾಂ. ಚಿನ್ನದಿಂದ ತಯಾರಿಸಿದ ನವರತ್ನಗಳ ಪೇಂಡೆಂಟ್ ಒಳಗೊಂಡಿರುವ 28 ಚಕ್ರಣಿಕಾ ಸಾಲಿಗ್ರಾಮದಿಂದ ಅಲಂಕರಿಸಲ್ಪಟ್ಟ ಸ್ವರ್ಣಹಾರವನ್ನು ಸಮರ್ಪಿಸಿದರು.
ಬಹಳ ಆಕರ್ಷಕ ಶೈಲಿಯಲ್ಲಿ ರಚಿಸಲ್ಪಟ್ಟಿರುವ ಈ ಆಭರಣವನ್ನು ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಕಾಶೀಮಠದ ಪರವಾಗಿ ಆಲ್ ಟೆಂಪಲ್ ಅಸೋಸಿಯೇಷನ್ ಅಧ್ಯಕ್ಷ ಅತುಲ್ ಕುಡ್ವ, ಫೂಜ್ಲಾನಾ ಗ್ರೂಪ್ನ ಅನಂತ್ ಪೈ, ದೆಹಲಿ ಸಮಾಜದ ಗಣೇಶ್ ಮಲ್ಯ ಹಾಗೂ ಸಮಾಜದ ಪ್ರಮುಖರು ಹಾಗೂ ಗಣ್ಯರು ಸೇರಿ ಹಸ್ತಾಂತರಿಸಿದರು.

