Chikkamagaluru: ಸಂವಿಧಾನ ಜಾಗೃತಿ ಜಾಥಾಕ್ಕೆ ಸ್ವಾಗತ
ಚಿಕ್ಕಮಗಳೂರು: ಸಂವಿಧಾನ ಜಾಗೃತಿ ಜಾಥಾವು ಜ.1 ರಂದು ಮೂಡಿಗೆರೆ ತಾಲ್ಲೂಕು ಪ್ರವೇಶಿಸಿದ್ದು, ನಂದೀಪುರ, ಬಸಗಲ್ ಹಾಗೂ ಮಾಕೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರಾಣೇಶ್, ಮಾಜಿ ಶಾಸಕ ಬಿ.ಬಿ. ನಿಂಗಯ್ಯ, ಸಹಾಯಕ ನಿರ್ದೇಶಕರು ಗ್ರೇಡ್-2, ಸಮಾಜ ಕಲ್ಯಾಣ ಇಲಾಖೆ, ಮೂಡಿಗೆರೆ ತಾಲ್ಲೂಕು, ಮುಖ್ಯಾಧಿಕಾರಿಗಳು, ಪಟ್ಟಣ ಪಂಚಾಯತ್, ಸದಸ್ಯರು, ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ರಥವನ್ನು ಅದ್ದೂರಿಯಿಂದ ಸ್ವಾಗತಿಸಿದರು.
ವೇದಿಕೆ ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರು ಸಂವಿಧಾನದ ಬಗ್ಗೆ ಸರ್ವರಿಗೂ ಅರಿವು ಮೂಡಿಸುವ ಕಾರ್ಯಕ್ರಮ ಇದಾಗಿದ್ದು, ಕಾರ್ಯಕ್ರಮದ ಪ್ರಯೋಜನವನ್ನು ಪ್ರತಿಯೊಬ್ಬರು ಪಡೆದುಕೊಳ್ಳುವಂತೆ ಹೇಳಿದರು.
ಫೆಬ್ರವರಿ 2 ರಂದು ರಥವು ಬೆಟ್ಟಗೆರೆ, ಬಿದರಹಳ್ಳಿ, ತ್ರಿಪುರ, ಫಲ್ಗುಣಿ, ಬಣಕಲ್, ತರುವೆ, ಬಾಳೂರು, ನಿಡುವಾಳೆ ಹಾಗೂ ಕೂವೆ ಗ್ರಾಮ ಪಂಚಾಯತ್ ಮೂಲಕ ಹಾದುಹೋಗಲಿದೆ. ಜಾಥವು ಆಗಮಿಸುವ ಎಲ್ಲಾ ಗ್ರಾಮ ಪಂಚಾಯತ್ಗಳ ಸಿಬ್ಬಂದಿಗಳು, ಜನಪ್ರತಿನಿಧಿಗಳು, ಸಂಘಟನೆಗಳ ಮುಖಂಡರುಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




