Kundapura: ಫೆ.6-ಕುಂದಾಪುರ ಶ್ರೀ ಬಗಳಾಂಬ ತಾಯಿ ದೇಗುಲದ ಆಶ್ಲೇಷಾ ಬಲಿ ಪೂಜೆ
Friday, February 2, 2024
ಕುಂದಾಪುರ: ಇಲ್ಲಿನ ಚಿಕ್ಕನ್ ಸಾಲ್ ರಸ್ತೆಯಲ್ಲಿರುವ ಶ್ರೀ ಬಗಳಾಂಬ ತಾಯಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಅಷ್ಟಬಂಧ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ದೇವಳದ ಪರಿವಾರ ದೇವರಾದ ಶ್ರೀ ನಾಗದೇವರಲ್ಲಿ ಪ್ರಾಯಶ್ಚಿತ್ತವಾಗಿ ಫೆ.6 ರಂದು ಬೆಳಿಗ್ಗೆ 9 ಗಂಟೆಯಿಂದ 'ಆಶ್ಲೇಷಾ ಬಲಿ ಪೂಜೆ' ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಮಹಾ ಪೂಜೆ, ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಬಳಿಕ 'ಅನ್ನ ಸಂತರ್ಪಣೆ' ಕಾರ್ಯಕ್ರಮ ನಡೆಯಲಿದೆ ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಿದೆ.