Kundapura: ಕುಂದಾಪುರ ಶ್ರೀ ಬಗಳಾಂಬ ತಾಯಿ ದೇಗುಲದಲ್ಲಿ ಆಶ್ಲೇಷಾ ಪೂಜೆ
Tuesday, February 6, 2024
ಕುಂದಾಪುರ: ಇಲ್ಲಿನ ಚಿಕ್ಕನ್ ಸಾಲ್ ರಸ್ತೆಯಲ್ಲಿರುವ ಶ್ರೀ ಬಗಳಾಂಬ ತಾಯಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಅಷ್ಟಬಂಧ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ದೇವಳದ ಪರಿವಾರ ದೇವರಾದ ಶ್ರೀ ನಾಗದೇವರಲ್ಲಿ ಪ್ರಾಯಶ್ಚಿತ್ತವಾಗಿ ಫೆ.6 ರಂದು ಬೆಳಿಗ್ಗೆ 9 ರಿಂದ 'ಆಶ್ಲೇಷಾ ಬಲಿ ಪೂಜೆ' ಕಾರ್ಯಕ್ರಮ ವೇ.ಮೂ. ಕೋಟ ಚಂದ್ರಶೇಖರ ಸೋಮಯಾಜಿಯವರ ನೇತೃತ್ವದಲ್ಲಿ ನಡೆಯಿತು.
ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ, ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಬಳಿಕ 'ಅನ್ನ ಸಂತರ್ಪಣೆ' ಕಾರ್ಯಕ್ರಮ ನಡೆಯಿತು. ನೂರಾರು ಭಕ್ತರು ನಾಗದೇವರ ಮತ್ತು ಶ್ರೀ ಬಗಳಾಂಬ ತಾಯಿಯ ದರ್ಶನ ಪಡೆದು ಪುನಿತರಾದರು.
ಈ ಸಂದರ್ಭದಲ್ಲಿ ದೇವಳದ ಧರ್ಮದರ್ಶಿಗಳಾದ ಗಣಪತಿ ಸುವರ್ಣ ಮತ್ತು ಜಲಜ ಸುವರ್ಣ ಮತ್ತು ಮಕ್ಕಳು ಹಾಗೂ ಉತ್ಸವ ಸಮಿತಿಯ ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯ ಸದಸ್ಯರು, ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.
