Mangalore: ಜಯ ಶ್ರೀಕೃಷ್ಣ ಸಮಿತಿಯಿಂದ ಸ್ವಚ್ಛತಾ ಅಭಿಯಾನ
Sunday, February 4, 2024
ಮೂಡುಬಿದಿರೆ: ಜಯ ಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಮಂಗಳೂರು-ಉಡುಪಿ ಜಿಲ್ಲೆ ಇದರ ವತಿಯಿಂದ ಆಲಂಗಾರು ಟೆಂಪೋ ಮಾಲಕ ಚಾಲಕರ ಸಂಘದ ಸಹಯೋಗದೊಂದಿಗೆ ಶುಕ್ರವಾರ ಆಲಂಗಾರು ಪರಿಸರದಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.
ಪುರಸಭಾ ಸದಸ್ಯ ಪಿ.ಕೆ. ಥೋಮಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ದ.ಕ. ಮತ್ತು ಉಡುಪಿ ಜಿಲ್ಲಾಧ್ಯಕ್ಷ ಡಿ.ಆರ್. ರಾಜು, ಉಪಾಧ್ಯಕ್ಷ ಸುರೇಶ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಅರುಣ್ ಪ್ರಕಾಶ್ ಶೆಟ್ಟಿ, ಜತೆ ಕಾರ್ಯದರ್ಶಿ ಕುಮಾರ್, ಕೋಶಾಧಿಕಾರಿ ಮುರಳೀಧರ ಕೋಟ್ಯಾನ್, ಸದಸ್ಯ ಸುಶಾಂತ್ ಕೋಟ್ಯಾನ್ ಮತ್ತು ಟೆಂಪೋ ಚಾಲಕರ ಸಂಘದ ಅಧ್ಯಕ್ಷ ಹಮೀದ್ ಮತ್ತು ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.