Moodubidire: ಆಳ್ವಾಸ್ ಕಾಲೇಜಿನಲ್ಲಿ ಮತದಾನ ಜಾಗೃತಿ ಅಭಿಯಾನ

Moodubidire: ಆಳ್ವಾಸ್ ಕಾಲೇಜಿನಲ್ಲಿ ಮತದಾನ ಜಾಗೃತಿ ಅಭಿಯಾನ


ಮೂಡುಬಿದಿರೆ: ಚುನಾವಣಾ ಪರ್ವ ದೇಶದ ಗರ್ವ ಈ ವರ್ಷದ ಚುನಾವಣಾ ಧ್ಯೇಯವಾಕ್ಯವಾಗಿ ಚುನಾವಣಾ ಆಯೋಗ ಘೋಷಿಸಿದೆ. ಉತ್ತಮ ವ್ಯಕ್ತಿಗಳ ಆಯ್ಕೆಯ ಮೂಲಕ ಸಧೃಡ ಸರ್ಕಾರದ ನಿರ್ಮಾಣ ಸಾಧ್ಯ. ಮತದಾನ ದಿನ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಿ, ಭವ್ಯ ಭಾರತದ ಏಳಿಗೆಗೆ ಕೊಡುಗೆ ನೀಡಬೇಕು ಎಂದು ಜಿಲ್ಲಾ ಮಟ್ಟದ ಸ್ವೀಪ್ ತರಬೇತುದಾರ ಚಂದ್ರನಾಥ್ ಎಂ ತಿಳಿಸಿದರು. 

ಮೂಡುಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಕೇಂದ್ರ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ, ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್ ಹಾಗೂ ವಿಘ್ನೇಶ್ವರ ಸ್ಪೋರ್ಟ್ಸ ಕ್ಲಬ್ ಸಹಯೋಗದಲ್ಲಿ ಆಯೋಜಿಸಿದ್ದ ಮತದಾನ ಜಾಗೃತಿ ಅಭಿಯಾನದಲ್ಲಿ ಮಾತನಾಡಿದರು. 

ತಾಪಂ ಕಾರ‍್ಯನಿರ್ವಾಹಕ ಅಧಿಕಾರಿ ಲೋಕೇಶ್ ಮತದಾನದ ಪ್ರತಿಜ್ಞಾ ವಿಧಿ ಭೋಧಿಸಿದರು. 

ಮತದಾನ ಜಾಗೃತಿ ಅಭಿಯಾನದ ಭಿತ್ತಿಚಿತ್ರವನ್ನು ಬಿಡುಗಡೆಗೊಳಿಸಲಾಯಿತು. 

ದ.ಕ ಜಿಲ್ಲಾ ಸ್ವೀಪ್ ಸಮಿತಿಯ ಸಂಯೋಜಕ ಡೊಂಬಯ್ಯ ಇಡ್ಕಿದು, ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಉಪಸ್ಥಿತರಿದ್ದರು. ವಿದ್ಯಾರ್ಥಿ ಶಶಾಂಕ್ ಕಾರ್ಯಕ್ರಮ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article