Moodubidire: ಬೀದಿ ನಾಟಕದ ಮೂಲಕ ಕಸ ವಿಲೇವಾರಿ ಬಗ್ಗೆ ಅರಿವು ಮೂಡಿಸಿದ ಆಳ್ವಾಸ್ ವಿದ್ಯಾರ್ಥಿಗಳು

Moodubidire: ಬೀದಿ ನಾಟಕದ ಮೂಲಕ ಕಸ ವಿಲೇವಾರಿ ಬಗ್ಗೆ ಅರಿವು ಮೂಡಿಸಿದ ಆಳ್ವಾಸ್ ವಿದ್ಯಾರ್ಥಿಗಳು


ಮೂಡುಬಿದಿರೆ: ಕಸ ವಿಲೇವಾರಿ ಮಾಡುವಲ್ಲಿ ನಮ್ಮ  ಮಾಡುವ ಜವಾಬ್ದಾರಿ, ಪ್ಲಾಸ್ಟಿಕ್ ಬಳಕೆಯಿಂದ ಆಗುವ ಅನಾಹುತಗಳು, ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನು ಹಾಕಿದರೆ ಏನಾಗುತ್ತೆ, ಯಾವ ರೀತಿಯಾಗಿ ಮನೆಯಲ್ಲಿ ಕಸವನ್ನು ವಿಂಗಡನೆ ಮಾಡಿ ನಾವು ಪುರಸಭೆಯ ವಾಹನಕ್ಕೆ ನೀಡಬೇಕೆಂಬುದರ ಬಗ್ಗೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ಬೀದಿ ನಾಟಕದ ಮೂಲಕ ಶುಕ್ರವಾರ ಸಂಜೆ ಮೂಡುಬಿದಿರೆ ಪೇಟೆಯಲ್ಲಿ ಜಾಗೃತಿ ಮೂಡಿಸಿದರು. 

ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಸ್ನಾತಕೋತ್ತರ ಪತ್ರಿಕೋದ್ಯಮ ಹಾಗೂ ನಮೂಹ ಸಂಹವನ ವಿಭಾಗದ ಜಾಹಿರಾತು ಮತ್ತು ಸಾರ್ವಜನಿಕ ಸಂಪರ್ಕ ಮುಕ್ತ ಆಯ್ಕೆಯ (ಓಪನ್ ಇಲೆಕ್ಟಿವ್) ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಕಾರ್ಯದ ಭಾಗವಾಗಿ ಈ ಬೀದಿ ನಾಟಕವನ್ನು ಹಮ್ಮಿಕೊಂಡಿದ್ದರು.

ಮೂಡುಬಿದಿರೆಯ ಪುರಸಭೆಯ ಸಹಯೋಗದೊಂದಿಗೆ ನಡೆದ ಈ ಜಾಗೃತಿ ಕಾರ್ಯಕ್ರಮವನ್ನು ಪುರಸಭಾ ಮುಖ್ಯಾಧಿಕಾರಿ ಇಂದು ಎಂ.ಅವರು ಸ್ವರಾಜ್ಯ ಮೈದಾನದಲ್ಲಿ ಉದ್ಘಾಟಿಸಿದರು.

ಪುರಸಭೆಯ ನಿಕಟಪೂರ್ವ ಅಧ್ಯಕ್ಷ ಪ್ರಸಾದ್ ಕುಮಾರ್, ವಾರ್ಡ್ ಸದಸ್ಯ ರಾಜೇಶ್ ನಾಯ್ಕ್  ಪುರಸಭೆಯ ಪರಿಸರ ಅಭಿಯಂತರೆ  ಶಿಲ್ಪಾ ಎಸ್., ಹಿರಿಯ ಆರೋಗ್ಯ ನಿರೀಕ್ಷಕಿ ಶಶಿರೇಖಾ ಬೀದಿ ನಾಟಕವನ್ನು ಆಳ್ವಾಸ್ ಸಮಾಜ ಕಾರ್ಯ ವಿಭಾಗದ ಉಪನ್ಯಾಸಕ ಸುಧೀಂದ್ರ ಶಾಂತಿ ನಿರ್ದೇಶಿಸಲಿದ್ದಾರೆ. ವಿದ್ಯಾರ್ಥಿಗಳ ತಂಡವು ನಗರದ ಮಾರ್ಕೆಟ್ ರೋಡ್ ಹಾಗೂ ಖಾಸಗಿ ಬಸ್ ನಿಲ್ದಾಣದಲ್ಲಿ ಬೀದಿ ನಾಟಕವನ್ನು ಪ್ರದರ್ಶಿಸಿತ್ತು. ಸಮಾಜ ಕಾರ್ಯ ಕಾಲೇಜಿನ ಪ್ರಾಧ್ಯಾಪಕಿ ಡಾ. ಮಧುಮಾಲ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

ಜಾಹಿರಾತು ಹಾಗೂ ಸಾರ್ವಜನಿಕ ಸಂಪರ್ಕ ವಿಷಯವನ್ನು ಕಲಿಯುವ ವಿದ್ಯಾರ್ಥಿಗಳಿಗೆ ಒಂದು ಕಾರ್ಯಕ್ರಮವನ್ನು ಆಯೋಜನೆ ಮಾಡುವ ಹಾಗೂ ಸಾರ್ವಜನಿಕ ಸಂಪರ್ಕದಲ್ಲಿ ಜನರನ್ನು ಮನವೊಲಿಸುವ ಕೌಶಲ್ಯಗಳನ್ನು ಪ್ರಾಯೋಗಿಕವಾಗಿ ಕಲಿಯುವ ನಿಟ್ಟಿನಲ್ಲಿ ಈ ಬೀದಿನಾಟಕ ಹಮ್ಮಿಕೊಳ್ಳಲಾಗಿತ್ತು. 




Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article