Breaking news: ಮಾತೃ ಪಕ್ಷಕ್ಕೆ ಮರಳಿದ ಅರುಣ್ ಕುಮಾರ್ ಪುತ್ತಿಲ
Thursday, March 14, 2024
ಬೆಂಗಳೂರು: ಬೆಂಗಳೂರಿನಲ್ಲಿ ಗುರುವಾರ ಅಧಿಕೃತವಾಗಿ ಪುತ್ತಿಲ ಪರಿವಾರದಿಂದ ಮತ್ತೆ ಬಿಜೆಪಿ ಪಕ್ಷಕ್ಕೆ ಮರಳಿದ್ದಾರೆ.
ಇವರು ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷವನ್ನು ತೊರೆದು ಪುತ್ತಿಲ ಪರಿವಾರ ಎಂಬ ಪಕ್ಷವನ್ನು ಸ್ಥಾಪಿಸಿ ಚುನಾವಣೆಯನ್ನು ಎದುರಿಸಿದ್ದರು.
ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಅರುಣ್ ಕುಮಾರ್ ಪುತ್ತಿಲ ಅವರನ್ನು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಬರಮಾಡಿಕೊಂಡರು.
ಶಾಸಕ ವಿ. ಸುನಿಲ್ ಕುಮಾರ್, ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಳ, ಮತ್ತಿತರರು ಉಪಸ್ಥಿತರಿದ್ದರು.