Mangalore: ಎನ್‌ಐಎ ದಾಳಿ-ಮನೆ ಪರಿಶೀಲನೆ

Mangalore: ಎನ್‌ಐಎ ದಾಳಿ-ಮನೆ ಪರಿಶೀಲನೆ


ಮಂಗಳೂರು: ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳ ತಂಡವೊಂದು ಮುಂಜಾನೆ ಮನೆಯೊಂದರ ಮೇಲೆ ದಾಳಿ ನಡೆಸಿದ ಘಟನೆ ಸುಳ್ಯ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಎಣ್ಮೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಮಂಗಳವಾರ  ಬೆಲಿಗ್ಗೆ ನಡೆದಿದೆ. 

ಕೇರಳ ಮೂಲದ ಬಿಜು ಅಬ್ರಹಾಂ ಎಂಬಾತ ಎಣ್ಮೂರಿನ ಚಿದಾನಂದ ಎಂಬವರಿಗೆ ಸೇರಿದ ಬಾಡಿಗೆ ಮನೆಯಲ್ಲಿ. ವಾಸವಿದ್ದ. ಕಳೆದ ಜುಲೈ ತಿಂಗಳಲ್ಲಿ ಬೆಂಗಳೂರಿನ ಸುಲ್ತಾನ್ ಪಾಳ್ಯದಲ್ಲಿ ಏಳು ಪಿಸ್ತೂಲ್ ಮತ್ತು ಸಜೀವ ಗುಂಡು ಸಹಿತ ಐವರು ಹಳೆ ಆರೋಪಿಗಳು ಸಿಕ್ಕಿಬಿದ್ದಿರುವುದು ಮತ್ತು ಅವರಿಗೆ ಲಷ್ಕರ್ ಉಗ್ರರ ಜೊತೆ ಸಂಪರ್ಕ ಇರುವುದು ಪತ್ತೆಯಾಗಿತ್ತು. ಈ ಆರೋಪಿಗಳಿಗೆ ಬಿಜು ಅಬ್ರಹಾಂ ಆಶ್ರಯ ಕೊಟ್ಟಿದ್ದಾನೆಂಬ ಆರೋಪದಲ್ಲಿ ಆತನ ಮನೆಯನ್ನು ಅಧಿಕಾರಿಗಳು ಶೋಧ ನಡೆಸಿದ್ದಾರೆ. 

ಐವರು ಆರೋಪಿಗಳನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದು ಪ್ರಕರಣದಲ್ಲಿ ಉಗ್ರರ ಜತೆ ಸಂಪರ್ಕ ಇರುವ ಹಿನ್ನೆಲೆಯಲ್ಲಿ ತನಿಖೆಯನ್ನು ಎನ್‌ಐಎಗೆ ಹಸ್ತಾಂತರ ಮಾಡಲಾಗಿತ್ತು. ಬೆಂಗಳೂರಿನ ರಾಮೇಶ್ವರ ಕೆಫೆ ಸ್ಫೋಟ ಕೃತ್ಯದ ಹಿನ್ನೆಲೆಯಲ್ಲಿ ಅಲರ್ಟ್ ಆಗಿರುವ ಎನ್‌ಐಎ ಅಧಿಕಾರಿಗಳು ಹಳೆ ಕೇಸುಗಳನ್ನು ತಾಳೆ ಹಾಕಿ ನೋಡುತ್ತಿದ್ದು, ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ.

ಬೆಂಗಳೂರಿನ ಜೈಲಿನಲ್ಲಿದ್ದ ಶಂಕಿತ ಲಷ್ಕರ್ ಉಗ್ರರ ಪ್ರೇರಣೆಯಲ್ಲಿ ಐವರು ಆರೋಪಿಗಳು ವಿಧ್ವಂಸಕ ಕೃತ್ಯಕ್ಕೆ ಸಂಚು ಹೂಡಿದ್ದರು ಎನ್ನುವ ವಿಚಾರವೂ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಇದೀಗ ಬೆಂಗಳೂರಿನ ಹೊಟೇಲಿನಲ್ಲಿ ವ್ಯಕ್ತಿಯೊಬ್ಬ ಬಾಂಬ್ ಇಟ್ಟು ಹೋಗಿರುವುದು ಭಾರೀ ಗಾಬರಿ ಹುಟ್ಟಿಸಿರುವುದರಿಂದ ಪೊಲೀಸರು ಮತ್ತು ಎನ್‌ಐಎ ಅಧಿಕಾರಿಗಳು ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ಮಾಡುತ್ತಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article