Mangalore: ಮೂಡ ಅಧ್ಯಕ್ಷ ಸದಾಶಿವ ಉಳ್ಳಾಲ್ ಅವರಿಗೆ ಅಭಿನಂದನೆ
Friday, March 1, 2024
ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಹಿರಿಯ ಸಹಕಾರಿ ಸದಾಶಿವ ಉಳ್ಳಾಲ್ ಅವರನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಶುಕ್ರವಾರ ಅಭಿನಂದಿಸಿದರು.
ಸಹಕಾರ ಕ್ಷೇತ್ರದಲ್ಲಿ ನಿಷ್ಠಾವಂತ ಸೇವೆಯನ್ನು ಸಲ್ಲಿಸಿರುವ ಸದಾಶಿವ ಉಳ್ಳಾಲ್ ಅವರು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲೂ ಉತ್ತಮ ಸೇವೆಯನ್ನು ಸಲ್ಲಿಸುವರು ಎಂಬ ಭರವಸೆ ಇದ್ದು, ಅವರಿಗೆ ಸಹಕಾರಿಗಳೆಲ್ಲರ ಪರವಾಗಿ ಹಾಗೂ ವೈಯಕ್ತಿಕವಾಗಿಯೂ ರಾಜೇಂದ್ರ ಕುಮಾರ್ ಅಭಿನಂದನೆ ಸಲ್ಲಿಸಿದರು.
ಶಶಿಕುಮಾರ್ ರೈ ಬಾಲ್ಯೋಟ್ಟು, ಎಂ. ವಾದಿರಾಜ ಶೆಟ್ಟಿ, ಜಯಪ್ರಕಾಶ್ ತುಂಬೆ ಇದ್ದರು.