Mangalore: ಚುನಾವಣಾ ಕಾರ್ಯನಿರ್ವಹಣಾ ತಂಡದ ಸಭೆ

Mangalore: ಚುನಾವಣಾ ಕಾರ್ಯನಿರ್ವಹಣಾ ತಂಡದ ಸಭೆ


ಮಂಗಳೂರು: ಮುಂಬರಲಿರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ಶಾಸಕ ವೇದವ್ಯಾಸ್ ಕಾಮತ್ ಅವರ ಅಧ್ಯಕ್ಷತೆಯಲ್ಲಿ ‘ಚುನಾವಣಾ ಕಾರ್ಯನಿರ್ವಹಣಾ ತಂಡ’ದ ಸಭೆಯು ಮಾ.19 ರಂದು ನಗರದ ಅಟಲ್ ಸೇವಾ ಕೇಂದ್ರದಲ್ಲಿ ನಡೆಯಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕರು, ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಈ ಬಾರಿ ಬಿಜೆಪಿಯು 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ಶತಃ ಸಿದ್ಧವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಅಭ್ಯರ್ಥಿ ಕ್ಯಾ. ಬೃಜೇಶ್ ಚೌಟ ಅವರನ್ನು ದಾಖಲೆಯ ಮತಗಳ ಅಂತರದಲ್ಲಿ ಗೆಲ್ಲಿಸಲು ಮಂಗಳೂರು ದಕ್ಷಿಣ ಕ್ಷೇತ್ರದಿಂದ 40,000ಕ್ಕೂ ಹೆಚ್ಚಿನ ಮತಗಳ ಮುನ್ನಡೆ ದೊರಕಿಸಿಕೊಡುವುದು ನಮ್ಮೆಲ್ಲರ ಜವಾಬ್ದಾರಿ. ಹಾಗಾಗಿ ಮುಂದಿನ 35 ರಿಂದ 40 ದಿನಗಳ ಕಾಲ ಪಕ್ಷಕ್ಕಾಗಿ ಸಂಪೂರ್ಣ ಸಮಯ ಕೊಡುವ ಮೂಲಕ ಈಗಿನಿಂದಲೇ ಕಾರ್ಯೋನ್ಮುಖರಾಗೋಣವೆಂದು ಕರೆ ನೀಡಿದರು.

ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ಮಂಗಳೂರು ದಕ್ಷಿಣ ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು, ಜಿಲ್ಲಾ ಉಪಾಧ್ಯಕ್ಷ ಹಾಗೂ ಮಂಡಲದ ಚುನಾವಣಾ ಪ್ರಭಾರಿ ರಾಕೇಶ್ ರೈ, ಲೋಕಸಭಾ ಚುನಾವಣಾ ಮಂಡಲ ಪ್ರಭಾರಿ ರವಿಶಂಕರ್ ಮಿಜಾರ್, ಲೋಕಸಭಾ ಚುನಾವಣಾ ಮಂಡಲ ಸಂಚಾಲಕ ವಿಜಯ್ ಕುಮಾರ್ ಶೆಟ್ಟಿ, ಮಾಜಿ ಸಚಿವ ನಾಗರಾಜ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಲಲ್ಲೇಶ್ ಕುಮಾರ್ ಹಾಗೂ ರಮೇಶ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.





Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article