Mangalore: ಪೇಜಾವರ ಶ್ರೀಗಳಿಂದ ಆಶೀರ್ವಾದ ಪಡೆದ ಚೌಟ
Sunday, March 31, 2024
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾ. ಬ್ರಜೇಶ್ ಚೌಟ ಅವರು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರನ್ನು ಧಾರ್ಮಿಕ ಮತ್ತು ಸಾಮಾಜಿಕ ಮುಂದಾಳು ಪ್ರದೀಪ್ ಕುಮಾರ್ ಕಲ್ಕೂರ ಅವರ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಸ್ವಾಮೀಜಿಯವರು ಕ್ಯಾ. ಬ್ರಜೇಶ್ ಚೌಟರಿಗೆ ಶಾಲು ಹೊದಿಸಿ ಫಲಮಂತ್ರಾಕ್ಷತೆ ನೀಡಿ ಆಶೀರ್ವಾದಿಸಿದರು. ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಪ್ರಕಾಶ್ ಪೂಜಾರಿ ಗರೋಡಿ ಮತ್ತಿತರರು ಉಪಸ್ಥಿತರಿದ್ದರು.



