Mangalore: ಕೆ.ಪಿ.ಸಿ.ಸಿ. ವಕ್ತಾರರಾಗಿ ಶೌವಾದ್ ಗೂನಡ್ಕ ಪುನರಾಯ್ಕೆ
Thursday, April 18, 2024
ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರರಾಗಿ ಶೌವಾದ್ ಗೂನಡ್ಕರವರನ್ನು ಪುನರ್ ನೇಮಕಗೊಳಿಸಿ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಕೆ.ಪಿ.ಸಿ.ಸಿ. ಮಾಧ್ಯಮ ಮತ್ತು ಸಂವಹನಾ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು ಆದೇಶಿಸಿದ್ದಾರೆ.
ಶೌವಾದ್ ಗೂನಡ್ಕರವರು ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾ ಎನ್.ಎಸ್.ಯು.ಐ. ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಪ್ರಸ್ತುತ ಸುಳ್ಯದ ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.