Mangalore: ಗ್ಯಾಸ್ ಸೋರಿ ಬೆಂಕಿ ಅನಾಹುತ

Mangalore: ಗ್ಯಾಸ್ ಸೋರಿ ಬೆಂಕಿ ಅನಾಹುತ

ಮಂಗಳೂರು: ರಸ್ತೆಬದಿಯಲ್ಲಿ ಇರಿಸಲಾದ ಸ್ವೀಟ್ ಕಾರ್ನರ್ ಸ್ಟಾಲ್ ಒಂದರ ಗ್ಯಾಸ್ ಸಿಲಿಂಡರಿನಲ್ಲಿ ಗ್ಯಾಸ್ ಸೋರಿಕೆ ಉಂಟಾಗಿ, ಬೆಂಕಿ ಅವಘಡ ಸಂಭವಿಸಿದ ಘಟನೆ ದೇರಳಕಟ್ಟೆ ಸಮೀಪ ಇಂದು ಸಂಜೆ ವೇಳೆ ನಡೆದಿದೆ. 

ಬಶೀರ್ ಎಂಬವರು ವ್ಯವಹಾರದಲ್ಲಿ ತೊಡಗಿದ್ದ ಸಂದರ್ಭ ಏಕಾಏಕಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣ ಅಲ್ಲಿದ್ದ ಗ್ರಾಹಕರು ಹಾಗೂ ಸ್ಟಾಲ್ ಮಾಲೀಕರು ಓಡಿ ಪಾರಾಗಿದ್ದಾರೆ. ಇಬೆಂಕಿ ತೀವ್ರಗೊಂಡ ಪರಿಣಾಮ ಸಾರ್ವಜನಿಕರು ಹೊಯ್ಗೆ, ನೀರು ಹಾಯಿಸಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದರೂ ಸಿಲಿಂಡರ್ ಪೂರ್ತಿ ಸೋರಿಕೆಯುಂಟಾಗಿ ಸ್ಟಾಲ್ ಭಾಗಶಃ ಸುಟ್ಟುಹೋಗಿದೆ.

ಘಟನೆಯಿಂದ ಸಾರ್ವಜನಿಕರು ಹಾಗೂ ಬಶೀರ್ ಪವಾಡ ಸದೃಶವಾಗಿ ಪಾರಾಗಿದ್ದಾರೆ. ಅವಘಡದಿಂದ ಸಾವಿರಾರು ರೂಪಾಯಿ ನಷ್ಟವಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article