Mangalore: ಟ್ಯಾಂಕರ್ ಹರಿದು ಸ್ಥಳದಲ್ಲಿಯೇ ಸಾವು
Friday, April 19, 2024
ಮಂಗಳೂರು: ಬೈಕ್ಗೆ ಢಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಪಾದಚಾರಿಯೊಬ್ಬನ ಮೇಲೆ ಟ್ಯಾಂಕರ್ ಹರಿದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರ ಹೊರವಲಯದ ಕೂಳೂರು ಬಳಿ ಶುಕ್ರವಾರ ವರದಿಯಾಗಿದೆ.
ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್ (29) ಎಂದು ಗುರುತಿಸಲಾಗಿದೆ. ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕೊಂದು ಢಿಕ್ಕಿಯಾಗಿ ಬಿದ್ದಿದ್ದ ಈತನ ಮೇಲೆ ಅತಿ ವೇಗದಿಂದ ಬರುತ್ತಿದ್ದ ಟ್ಯಾಂಕರ್ ಹರಿದಿದೆ ಎನ್ನಲಾಗಿದೆ.