Moodubidire: ವಾಲ್ಪಾಡಿಯಲ್ಲಿ ಕೂಲಿ ಕಾರ್ಮಿಕರಿಗೆ ಮತದಾನ ಜಾಗೃತಿ

Moodubidire: ವಾಲ್ಪಾಡಿಯಲ್ಲಿ ಕೂಲಿ ಕಾರ್ಮಿಕರಿಗೆ ಮತದಾನ ಜಾಗೃತಿ


ಮೂಡುಬಿದಿರೆ: ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವೀಪ್ ಸಮಿತಿ ಹಾಗೂ ಮೂಡುಬಿದಿರೆ ತಾಲೂಕು ಪಂಚಾಯತ್ ವತಿಯಿಂದ ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಳಿಯೂರು ಸುಮಂಗಲಿ ಕ್ಯಾಶ್ಯು ಇಂಡಸ್ಟ್ರೀಸ್‌ನಲ್ಲಿ ದುಡಿಯುತ್ತಿರುವ ಕೂಲಿ ಕಾರ್ಮಿಕರಿಗೆ ಗುರುವಾರ ಸಂಜೆ ಮತದಾನ ಜಾಗೃತಿ ಮೂಡಿಸಲಾಯಿತು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಸ್. ವೆಂಕಟಾಚಲಪತಿ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ಮತದಾನದ ಮಹತ್ವವನ್ನು ತಿಳಿಸಿ ಮಾತನಾಡಿ, ಮಹಿಳಾ ಕಾರ್ಮಿಕರಿಗೆ ಗುಲಾಬಿ ಹೂ ಹಾಗೂ ಕರಪತ್ರವನ್ನು ನೀಡಿ ಮತದಾನ ಮಾಡುವಂತೆ ತಿಳಿಸಲಾಯಿತು. 

ಸುಮಂಗಲಿ ಕ್ಯಾಶ್ಯು ಇಂಡಸ್ಟ್ರೀಸ್‌ನ ಮುಖ್ಯಸ್ಥೆ ಜಾನೇಟ್ ರೂಪೇಶ್ ಪಿಂಟೋ, ವಾಲ್ಪಾಡಿ ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಪ್ರಿಯಾ, ಮಂಜುಶ್ರೀ, ಸಂದೀಪ್, ಐಇಸಿ ಸಂಯೋಜಕ ಅನ್ವಯ, ತಾ.ಪಂ ಸಿಬ್ಬಂದಿಗಳಾದ ಮುಖೇಶ್, ಮಾದವ್ ಉಪಸ್ಥಿತರಿದ್ದರು. ತಾ.ಪಂ. ಸಹಾಯಕ ನಿರ್ದೇಶಕ ಸಾಯೀಶ ಚೌಟ ಕೆ. ಅವರು ಕಾರ್ಯಕ್ರಮವನ್ನು ನಿರೂಪಿಸಿದರು.




Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article