Moodubidire: ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜಿನಲ್ಲಿ-ಮಂಗಳೂರು ವಿವಿ ಅಂತರ್ ಕಾಲೇಜು ಸಾಫ್ಟ್ಬಾಲ್ ಪಂದ್ಯಾಟ

Moodubidire: ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜಿನಲ್ಲಿ-ಮಂಗಳೂರು ವಿವಿ ಅಂತರ್ ಕಾಲೇಜು ಸಾಫ್ಟ್ಬಾಲ್ ಪಂದ್ಯಾಟ


ಮೂಡುಬಿದಿರೆ: ಮಂಗಳೂರು ವಿವಿ ಯ ಅಂತರ್ ಕಾಲೇಜು ಮಟ್ಟದ  ಪುರುಷರ ಹಾಗೂ ಮಹಿಳೆಯರ ವಿಭಾಗದ  ಸಾಫ್ಟ್ಬಾಲ್ ಪಂದ್ಯಾಟವು ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜಿನ ಕ್ರೀಡಾಂಗಣದಲ್ಲಿ ಸೋಮವಾರ ನಡೆಯಿತು. 

ಮೂಡುಬಿದಿರೆ ಪುರಸಭಾ ಸದಸ್ಯ, ಕಾಲೇಜಿನ ಹಳೆ ವಿದ್ಯಾರ್ಥಿ   ಪಿ.ಕೆ. ಥೋಮಸ್ ಅವರು  ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿ ಜೀವನದಲ್ಲಿ ಸೋಲು ಗೆಲುವು ಇದ್ದಂತೆಯೆ ಕ್ರೀಡೆಯಲ್ಲಿಯೂ ಇರುತ್ತದೆ. ಮೊದಲು ನಾವು ಸೋಲುವುದನ್ನು ಕಲಿತರೆ ಮುಂದೆ ಸತತ ಪ್ರಯತ್ನದಿಂದ ಗೆಲುವನ್ನು ಸಾಧಿಸಲು ಸಾಧ್ಯವಿದೆ ಎಂದರು.

ಮಂಗಳೂರು ವಿವಿಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಕಿಶೋರ್ ಕುಮಾರ್ ಸಿ.ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು.  ಕಾಲೇಜು ಆಡಳಿತ ಮಂಡಳಿಯ ಉಪಾಧ್ಯಕ್ಷ ಸಂಪತ್ ಸಾಮ್ರಾಜ್ಯ ಅಧ್ಯಕ್ಷತೆ ವಹಿಸಿದ್ದರು. 

ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಶೆಟ್ಟಿ,  ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ರಮೇಶ್ ಭಟ್, ಎಂ.ಕೆ.ಅನಂತ್ರಾಜ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಧನಂಜಯ ಶೆಟ್ಟಿ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ. ಹರೀಶ್, ದೈಹಿಕ ಶಿಕ್ಷಣ ನಿರ್ದೇಶಕ ಅಕ್ಷಿತ್ ರೈ, ಪಂದ್ಯಾಟದ ವೀಕ್ಷಕರಾದ ಸಂದೀಪ್ ಸಾಲಿಯಾನ್ ಮತ್ತು ಕ್ರೀಡಾ ಕಾರ್ಯದರ್ಶಿ ಚೇತನ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಶ್ರುತಿ ಸ್ವಾಗತಿಸಿ,  ಪ್ರಣಮ್ಯ ಜೈನ್ ನಿರೂಪಿಸಿದರು. ಶ್ರಾವ್ಯ ವಂದಿಸಿದರು.




Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article