Bantwal: ಬಂಟ್ವಾಳದಲ್ಲಿ ಮೇ ದಿನಾಚರಣೆ-2024

Bantwal: ಬಂಟ್ವಾಳದಲ್ಲಿ ಮೇ ದಿನಾಚರಣೆ-2024


ಬಂಟ್ವಾಳ: ಎನ್‌ಡಿಎ ಮೈತ್ರಿಕೂಟ ಮಗದೊಮ್ಮೆ ಅಧಿಕಾರಕ್ಕೆ ಬಂದರೆ ನೂರಾರು ವರ್ಷಗಳ ತ್ಯಾಗ ಬಲಿದಾನಗಳ ಐತಿಹಾಸಿಕ ಹೋರಾಟದಿಂದ ಗಳಿಸಿದಂತಹ ಕಾರ್ಮಿಕ ಕಾಯ್ದೆ ಕಾನೂನುಗಳು ಕೈ ತಪ್ಪಿ ಹೋಗಲಿದೆ ಎಂದು ಎಐಟಿಯುಸಿ ಜಿಲ್ಲಾ ಉಪಾಧ್ಯಕ್ಷ ಬಿ. ಶೇಖರ್ ಹೇಳಿದರು.

ಬಂಟ್ವಾಳ ಬೈಪಾಸ್‌ನಲ್ಲಿರುವ ಎ. ಶಾಂತಾರಾಂ ಪೈ ಸ್ಮಾರಕ ಭವನದಲ್ಲಿ ಎಐಟಿಯುಸಿ ಬಂಟ್ವಾಳ ತಾಲೂಕು ಸಮಿತಿ ಆಶ್ರಯದಲ್ಲಿ ಜರುಗಿದ ಮೇ ದಿನಾಚರಣೆ-2024ರ ಸಭೆಯನ್ನುದ್ಧೇಶಿಸಿ ಅವರು ಮಾತನಾಡುತ್ತಿದ್ದರು.

ಸಭೆಗೆ ಮುನ್ನ ಧ್ವಜಾರೋಹಣ ನಡೆಯಿತು. ಎಐಟಿಯುಸಿ ಬಂಟ್ವಾಳ ತಾಲೂಕಿನ ಹಿರಿಯ ಮುಖಂಡ ಬಿ. ಬಾಬು ಭಂಡಾರಿ ಧ್ವಜಾರೋಹಣ ನೆರವೇರಿಸಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಎಐಟಿಯುಸಿ ಜಿಲ್ಲಾ ನಾಯಕಿ ಶಮಿತಾ, ಎಐಟಿಯುಸಿ ಜಿಲ್ಲಾ ಯುವ ನಾಯಕ ಪ್ರೇಮನಾಥ ಕೆ. ಉಪಸ್ಥಿತರಿದ್ದರು. ಎಐವೈಎಫ್‌ನ ಬಂಟ್ವಾಳದ ನಾಯಕ ಹರ್ಷಿತ್, ಮೋಹನ್ ಅರಳ, ಸುರೇಶ್ ಕೆ, ಭಾರತೀಯ ಮಹಿಳಾ ಒಕ್ಕೂಟದ ವನಜಾಕ್ಷಿ, ಸರೋಜಿನಿ, ಕುಸುಮಾ ವಹಿಸಿದ್ದರು. ಎಐಟಿಯುಸಿ ಜಿಲ್ಲಾ ಸಹಕಾರ್ಯದರ್ಶಿ ಸುರೇಶ್ ಕುಮಾರ್ ಬಂಟ್ವಾಳ್ ಸ್ವಾಗತಿಸಿ, ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article