Manjeshwar: ಅಪಘಾತ-ಬಾಲಕ ಸಹಿತ ಮೂವರು ಸಾವು

Manjeshwar: ಅಪಘಾತ-ಬಾಲಕ ಸಹಿತ ಮೂವರು ಸಾವು

ಮಂಜೇಶ್ವರ: ಆಂಬುಲೆನ್ಸ್ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಾಲಕ ಸಹಿತ ಮೂವರು ಮೃತಪಟ್ಟು, ಇತರ ಮೂವರು ಗಾಯಗೊಂಡ ಘಟನೆ ಇಂದು ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿಯ ಕಾಸರಗೋಡು ಮಂಜೇಶ್ವರ ಸಮೀಪದ ಕುಂಜತ್ತೂರಿನಲ್ಲಿ ನಡೆದಿದೆ. 

ಮೃತಪಟ್ಟವರು ಕಾರಿನಲ್ಲಿದ್ದ ತ್ರಿಶ್ಯೂರು ಇರಿಂಗಾಲಕುಡ ನಿವಾಸಿಗಳಾದ ಶಿವಕುಮಾರ್ (54), ಶರತ್ ಮೆನೋನ್(23) ಮತ್ತು ಸೌರವ್(15) ಎಂದು ಗುರುತಿಸಲಾಗಿದೆ. ಆಂಬುಲೆನ್ಸ್‌ನಲ್ಲಿದ್ದ ರೋಗಿ ಉಷಾ, ಜೊತೆಗಿದ್ದ ಶಿವದಾಸ್ ಮತ್ತು ಆಬುಲೆನ್ಸ್ ಚಾಲಕ ಗಾಯಗೊಂಡಿದ್ದಾರೆ. 

ಅಪಘಾತದಿಂದ ನಜ್ಜುಗುಜ್ಜಾದ ಕಾರಿನಿಂದ ಹರಸಾಹಸಪಟ್ಟು ಗಾಯಾಳುಗಳನ್ನು ಹೊರತೆಗೆಯಲಾಯಿತು. ಈ ವೇಳೆ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಓರ್ವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 

ಸೋಮವಾರ ಚಟ್ಟಂಚಾಲ್‌ನಲ್ಲಿ ಸಂಭವಿಸಿದ ವಾಹನ ಅಪಘಾತವೊಂದರಲ್ಲಿ ಗಾಯಗೊಂಡಿದ್ದ ಉಷಾರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾಸರಗೋಡು ಆಸ್ಪತ್ರೆಯಿಂದ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. 

ಕಾರಿನಲ್ಲಿದ್ದವರು ಕೊಲ್ಲೂರು ಕ್ಷೇತ್ರ ದರ್ಶನ ಮುಗಿಸಿ ಮರಳಿ ತ್ರಿಶ್ಯೂರಿಗೆ ತೆರಳುತ್ತಿದ್ದರು.  ಅಪಘಾತದ ಬಳಿಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ಥಗೊಂಡಿತು. 

ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಆಂಬುಲೆನ್ಸ್  ರಸ್ತೆಯಲ್ಲಿ ಮಗುಚಿ ಬಿದ್ದಿತ್ತು. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article