Ujire: ಮಹಿಳೆಯರಿಗೆ ಪುರುಷರಿಂದ ಆಶ್ರಯ ಬೇಕಾಗಿಲ್ಲ, ಸಕಾಲಿಕ ಪ್ರೋತ್ಸಾಹಬೇಕಾಗಿದೆ: ಡಿ. ವೀರೇಂದ್ರ ಹೆಗ್ಗಡೆ

Ujire: ಮಹಿಳೆಯರಿಗೆ ಪುರುಷರಿಂದ ಆಶ್ರಯ ಬೇಕಾಗಿಲ್ಲ, ಸಕಾಲಿಕ ಪ್ರೋತ್ಸಾಹಬೇಕಾಗಿದೆ: ಡಿ. ವೀರೇಂದ್ರ ಹೆಗ್ಗಡೆ


ಉಜಿರೆ: ಮಹಿಳೆಯರು ಬುದ್ಧಿವಂತರಾಗಿದ್ದು, ಸದಾಜಾಗೃತರಾಗಿರುತ್ತಾರೆ. ಅವರಲ್ಲಿಅದ್ಭುತ ಶಕ್ತಿ ಇದೆ. ಆದುದರಿಂದಲೆಇಂದುಅವರುತಮಗೆ ಸಿಗುವ ಎಲ್ಲಾ ಅವಕಾಶ, ಸೌಲಭ್ಯಗಳ ಸದುಪಯೋಗ ಪಡೆದು ಸ್ವಾವಲಂಬಿಗಳಾಗಿ ಎಲ್ಲಾ ಕ್ಷೇತ್ರಗಳಲ್ಲಿ ಅದ್ಭುತ ಸಾಧನೆ ಮಾಡುತ್ತಿದ್ದಾರೆಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಹೇಳಿದರು.

ಅವರು ಗುರುವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದರಜತಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರಿಗೆ ಪುರುಷರಿಂದಆಶ್ರಯ ಬೇಕಾಗಿಲ್ಲ. ಸದಾ ಸಕಾಲಿಕ ಪ್ರೋತ್ಸಾಹ, ಪ್ರೇರಣೆಅಗತ್ಯವಾಗಿದೆ. ಕುಟುಂಬ ಮತ್ತು ಸಮಾಜದ ಸುಗಮ ನಿರ್ವಹಣೆಯಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸುತ್ತಾರೆ. ಬಾಲ್ಯದಿಂದಲೆ ಮಕ್ಕಳನ್ನು ತಿದ್ದಿ, ತೀಡಿಉತ್ತಮ ಸಂಸ್ಕಾರ ನೀಡಿಆದರ್ಶ ವ್ಯಕ್ತಿತ್ವ ರೂಪಿಸುವುದು ಮಾತೆಯರ ಕರ್ತವ್ಯವೂ, ಹೊಣೆಗಾರಿಕೆಯೂ ಆಗಿದೆ. ಆದುದರಿಂದಲೆ ಧರ್ಮಸ್ಥಳದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡುವಾಗ ಪೋಷಕರಿಗೂ ತಜ್ಞರಿಂದ ಮಾಹಿತಿ, ಮಾರ್ಗದರ್ಶನ ನೀಡಲಾಗುತ್ತದೆ ಎಂದು ಹೇಳಿದರು.

ಹೇಮಾವತಿ ಹೆಗ್ಗಡೆಯವರು ಬರೆದ “ಗೆಳತಿ” ಕೃತಿಯನ್ನು ಬಿಡುಗಡೆಗೊಳಿಸಲಾಯಿತು.

ಚಲನಚಿತ್ರ ನಟಿ ಪದ್ಮಜಾ ರಾವ್ ಮಾತನಾಡಿ ಧರ್ಮಸ್ಥಳದಲಿ ತಮಗೆಲ ದೊರೆತ ರಾಜಮರ್ಯಾದೆಯೊಂದಿಗೆ ಗೌರವಪೂರ್ವಕ ಆತಿಥ್ಯಕ್ಕೆ ಸಂತಸ ವ್ಯಕ್ತಪಡಿಸಿದರು. ಯಾವುದೇ  ಕ್ಷೇತ್ರದಲ್ಲಿ ಮಹಿಳೆಯರು ಸ್ವಾವಲಂಬಿಗಳಾದರೆ ಧೈರ್ಯ ಮತ್ತು ಆತ್ಮವಿಶ್ವಾಸ ಮೂಡಿ ಬರುತ್ತದೆ. ಮಹಿಳಾ ಸಬಲೀಕರಣವೂ ಆಗುತ್ತದೆ ಎಂದರು.

ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ರಜತ ಸಂಚಿಕೆ ಬಿಡುಗಡೆಗೊಳಿಸಿದ ಮಕ್ಕಳ ಹೃದ್ರೋಗ ತಜ್ಞೆ ಡಾ. ವಿಜಯಲಕ್ಷ್ಮಿ ಬಾಳೇಕುಂದ್ರಿ ಮಾತನಾಡಿ, ದಾನ ಚಿಂತಾಮಣಿಅತ್ತಿಮಬ್ಬೆ, ಉಳ್ಳಾಲದ ರಾಣಿ ಅಬ್ಬಕ್ಕ, ಮೊದಲಾದವರು ಮಹಿಳೆಯರಿಗೆ ಪ್ರೇರಕಶಕ್ತಿಯಾಗಿದ್ದಾರೆ. ಮಹಿಳೆಯರು ಸದಾ ಮಾತನಾಡುವ ಮಾತೆಯರಾಗದೆ, ಚಿಂತೆಯನ್ನು ಬಿಟ್ಟು ಸದಾಚಿಂತನೆಯನ್ನು ಮಾಡುವ ಚಿಂತಾಮಣಿಗಳಾಗಬೇಕು. ಮಹಿಳೆಯರು ಸಮರ್ಪಣಾ ಮನೋಭಾವದಿಂದ ಆರೋಗ್ಯಪೂರ್ಣ, ಕುಟುಂಬ, ಸಮಾಜ ಮತ್ತುರಾಷ್ಟ್ರನಿರ್ಮಾಣಕ್ಕೆಅಮೂಲ್ಯಕೊಡುಗೆ ನೀಡಬೇಕು. ಪಾಶ್ಚಾತ್ಯ ಸಂಸ್ಕೃತಿಯ ಅಂಧಾನುಕರಣೆ ಸಲ್ಲದು ಎಂದು ಹೇಳಿದರು.

ಸಾಧಕರ ಸನ್ಮಾನ..

ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡಿದ ಬೆಳಗಾವಿಯ ಸುಮನ್ ಪತ್ರಾವಳಿ, ಮೂಡಬಿದ್ರೆಯ ವೀಣಾ ಶೆಟ್ಟಿ, ಬೆಂಗಳೂರಿನ ಸುಶೀಮಾ ಯಶವಂತ್, ಛಾಯಾಚಿತ್ರಗ್ರಾಹಕಿ ಹುಣಸೂರಿನ ಛಾಯಾ ಸುನಿಲ್ ಮತ್ತು ಮೈಸೂರಿನ ಕುಮಾರಿ ಅನನ್ಯಜೈನ್ ಅವರನ್ನುಗೌರವಿಸಲಾಯಿತು.

ಅಧ್ಯಕ್ಷತೆ ವಹಿಸಿದ ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಗೌರವಾಧ್ಯಕ್ಷರಾದ ಹೇಮಾವತಿ  ಹೆಗ್ಗಡೆ ಮಾತನಾಡಿ, ಜೈನಧರ್ಮದಲ್ಲಿತ್ಯಾಗ, ಅಹಿಂಸೆ ಮತ್ತು ವಿರಕ್ತಿಗೆ ಪ್ರಾಶಸ್ತ್ಯವಿದೆ. ಮಹಿಳೆಯರು ಕುಟುಂಬದ ಮತ್ತುಸಮಾಜದ ಅವಿಭಾಜ್ಯಅಂಗವಾಗಿದ್ದು ಬಿಂದುವಾಗಿ ಮಾತ್ರವಲ್ಲದೆ ಸಿಂಧುವಾಗಿಯೂ ಎಲ್ಲರೊಂದಿಗೂ ಮುಕ್ತವಾಗಿ ಬೆರೆತು ನಿರಂತರ ಪ್ರಗತಿಗೆ ಸಹಕರಿಸಬೇಕು. ಮಹಿಳೆಯರಿಗೆ ಮಂದಿರಗಳು ಪಾಠಶಾಲೆಯಾದರೆ, ಸಮಾಜ ಪ್ರಯೋಗಶಾಲೆಯಾಗಬೇಕು. ಮಹಿಳೆಯರ ತ್ಯಾಗ, ಸೇವೆ, ಪ್ರೀತಿ-ವಿಶ್ವಾಸಕ್ಕೆ, ಸಮಾಜಸೇವೆಗೆ ಬೆಲೆಕಟ್ಟಲು ಸಾಧ್ಯವಿಲ್ಲ. ಸೇವೆಯಿಂದ ಸಿಗುವ ತೃಪ್ತಿ, ಸಂತೋಷ ಮತ್ತು ನೆಮ್ಮದಿಯೇ ಮಹಿಳೆಯರಿಗೆ ದೊಕುವ ನಿಜವಾದ ಪ್ರಶಸ್ತಿ ಎಂದು ಹೇಮಾವತಿ ಹೆಗ್ಗಡೆ ಅಭಿಪ್ರಾಯಪಟ್ಟರು. ಮಹಿಳೆಯರು ತಮ್ಮ ಮಕ್ಕಳನ್ನು ಉತ್ತಮ ಸಂಸ್ಕಾರವಂತರಾಗಿ ರೂಪಿಸಬೇಕು ಎಂದು ಹೇಳಿದರು.

ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರಕುಮಾರ್, ಡಿ. ಹರ್ಷೇಂದ್ರಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ್ತು ಶ್ರದ್ಧಾ ಅಮಿತ್ ಉಪಸ್ಥಿತರಿದ್ದರು.

ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಅಧ್ಯಕ್ಷೆ ಪದ್ಮಿನಿಪದ್ಮರಾಜ್ ಸ್ವಾಗತಿಸಿದರು. ಜಯಶ್ರೀ ವಂದಿಸಿ, ಕುಮುದಾನಾಗಭೂಷಣ್ ಕಾರ್ಯಕ್ರಮ ನಿರ್ವಹಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article