
Karkala: ತೆಂಗಿನ ಮರದಿಂದ ಬಿದ್ದು ಸಾವು
Saturday, June 22, 2024
ಕಾರ್ಕಳ: ತೆಂಗಿನ ಮರದಿಂದ ಕಾಯಿ ಕೀಳುವಾಗ ಅಕಸ್ಮಿಕವಾಗಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಾರ್ಕಳ ಶ್ರೀದೇವಿ ಕಾಲೋನಿ ಹತ್ತಿರ ನಡೆದಿದೆ. ಕುಕ್ಕುಂದೂರು ದುರ್ಗಾಪರಮೇಶ್ವರಿ ದೇವಸ್ಥಾನದ ಸಮೀಪದ ನಿವಾಸಿ ಶಂಕರ (50) ಮೃತರು.
ಕೃಷಿ ಕೆಲಸ ಮಾಡಿಕೊಂಡಿದ್ದ ಇವರು, ಜೂ.19ರಂದು ಲೋಹಿತ್ ಎಂಬವರ ಮನೆಯ ಬಳಿಯ ತೆಂಗಿನ ಮರದಿಂದ ತೆಂಗಿನಕಾಯಿ ತೆಗೆಯುತ್ತಿರುವಾಗ ಆಕಸ್ಮಿಕವಾಗಿ ಬಿದ್ದರು. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.