Kasaragodu: ಕಾಸರಗೋಡಿನ ಆರೋಗ್ಯಾಧಿಕಾರಿಯ ಶವ ಪತ್ತೆ

Kasaragodu: ಕಾಸರಗೋಡಿನ ಆರೋಗ್ಯಾಧಿಕಾರಿಯ ಶವ ಪತ್ತೆ


ಕಾಸರಗೋಡು: ಆರೋಗ್ಯ ಅಧಿಕಾರಿಯೊಬ್ಬರು ವಾಸಸ್ಥಳದ ಶೌಚಾಲಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳವಾರ ಸಂಜೆ ಬೆಳಕಿಗೆ ಬಂದಿದೆ. ಪತ್ತನಂತ್ತಿಟ್ಟದ ಮನೋಜ್ (45) ಮೃತಪಟ್ಟವರು. 

ಮಂಜೇಶ್ವರ ಬ್ಲಾಕ್ ಪಂಚಾಯತ್ ಕುಟುಂಬ ಕಲ್ಯಾಣ ಕೇಂದ್ರದ ಆರೋಗ್ಯಾಧಿಕಾರಿ ಆಗಿದ್ದರು. ಮಂಜೇಶ್ವರ ಎಸ್.ಐ.ಟಿ. ಶಾಲಾ ಸಮೀಪದ ವಸತಿ ಗೃಹದಲ್ಲಿ ವಾಸವಾಗಿದ್ದರು ದುರ್ವಾಸನೆ ಕಂಡು ಬಂದ ಹಿನ್ನಲೆಯಲ್ಲಿ ಪರಿಸರ ವಾಸಿಗಳು ಗಮನಿಸಿದಾಗ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಒಬ್ಬರು ಮಾತ್ರ ಈ ಕೊಠಡಿಯಲ್ಲಿದ್ದರು ಎನ್ನಲಾಗಿದೆ.

ಹೃದಯಘಾತದಿಂದ ಮೃತಪಟ್ಟಿರಹುದು ಎಂದು ಶಂಕಿಸಲಾಗಿದೆ. ಎರಡು ದಿನಗಳ ಹಿಂದೆ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ ಮಂಜೇಶ್ವರ ಠಾಣಾ ಪೊಲೀಸರು ಮಹಜರು ನಡೆಸಿದರು. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಎರಡು ತಿಂಗಳ ಹಿಂದೆ ಮಂಜೇಶ್ವರದಲ್ಲಿ ಅರೋಗ್ಯ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article