Mangalore: ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ನೂತನ ಸಂಸದರ ಭೇಟಿ

Mangalore: ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ನೂತನ ಸಂಸದರ ಭೇಟಿ


ಮಂಗಳೂರು: ಜೂ.20 ರಂದು ಶಕ್ತಿನಗರದ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ 2024ರ ಲೋಕಸಭಾ ಚುನಾವಣೆಯಲ್ಲಿ ನೂತನವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾಗಿ ಚುನಾಯಿತರಾದ ಕ್ಯಾ. ಬ್ರಿಜೇಶ್ ಚೌಟ ಆಗಮಿಸಿ, ದೇವರ ದರ್ಶನ ಪಡೆದರು.

ಸಂಸದರಾಗಿ ಆಯ್ಕೆಯಾದ ನಂತರ ಪ್ರಥಮ ಬಾರಿಗೆ ಆಗಮಿಸಿದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಕ್ಷೇತ್ರದ ಆಡಳಿತ ಮೊಕ್ತೇಸರ ಡಾ. ಕೆ.ಸಿ ನಾಕ್ ಮತ್ತು ಭಕ್ತಾದಿಗಳು ಸ್ವಾಗತಿಸಿದರು. ಸಪರಿವಾರ ಶ್ರೀ ಗೋಪಾಲಕೃಷ್ಣ ದೇವರ ದರ್ಶನ ಪಡೆದ ನೂತನ ಸಂಸದರು ಪ್ರಸಾದ ಸ್ವೀಕರಿಸಿದರು.

ಕ್ಷೇತ್ರದ ಪರವಾಗಿ ಆಡಳಿತ ಮೊಕ್ತೇಸರ ಡಾ. ಕೆ.ಸಿ ನಾಕ್ ಶಾಲು ಹೊದಿಸಿ ಶ್ರೀ ದೇವರ ಪ್ರಸಾದವನ್ನು ನೀಡುವುದರ ಮೂಲಕ ಗೌರವಿಸಿದರು. ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾಧ್ಯಕ್ಷ ಹೆಚ್.ಕೆ. ಪುರುಷೋತ್ತಮ್, ಶಕ್ತಿ ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ್ ಕೆ. ಹಿಂದೂ ಜಾಗರಣಾ ವೇದಿಕೆಯ ಪ್ರಮುಖರು ಹಾಗೂ ವಕೀಲರಾದ ಹರೀಶ್ ಮತ್ತು ಹರ್ಷಿತ್, ಬಿಜೆಪಿ ದಕ್ಷಿಣ ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ಸ್ಥಳೀಯ ಕಾರ್ಪರೇಟರ್‌ಗಳಾದ ವನಿತಾ ಪ್ರಸಾದ್, ಕಿಶೋರ್ ಕೊಟ್ಟಾರಿ, ಶಕೀಲಾ ಕಾವ, ವಕೀಲ ಮಹೇಶ್ ಜೋಗಿ, ದೇವಸ್ಥಾನದ ಆಡಳಿತಾಧಿಕಾರಿ ಆದೀಶ್.ಕೆ ಮತ್ತಿತರರು ಉಪಸ್ಥಿತರಿದ್ದರು.






Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article