Mangalore: ಭಾರತದ ಅಮೃತ ಕಾಲಕ್ಕೆ ಬೇಕಾದ ವ್ಯಕ್ತಿಗಳು ರಾಮಕೃಷ್ಣ ವಿದ್ಯಾದೇಗುಲದಿಂದ ಮೂಡಿಬರಲಿ

Mangalore: ಭಾರತದ ಅಮೃತ ಕಾಲಕ್ಕೆ ಬೇಕಾದ ವ್ಯಕ್ತಿಗಳು ರಾಮಕೃಷ್ಣ ವಿದ್ಯಾದೇಗುಲದಿಂದ ಮೂಡಿಬರಲಿ


ಮಂಗಳೂರು: ಗುರುಕುಲ ಮಾದರಿಯಲ್ಲಿ ಹಾಗೂ ಆಧುನಿಕ ಶಿಕ್ಷಣ ಪದ್ದತಿಯಲ್ಲಿ ಶಿಕ್ಷಣವನ್ನು ನೀಡುವ ನಿಟ್ಟಿನಲ್ಲಿ ಸ್ವಾಮಿ ವಿವೇಕಚೈತನ್ಯಾನಂದ ಸ್ವಾಮೀಜಿಯವರ ಈ ಮಹತ್ತರವಾದ ಪ್ರಯತ್ನವು ಸ್ವಾಮಿ ವಿವೇಕಾನಂದರ ಆದರ್ಶಗಳಿಗೆ ಪೂರಕವಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು.

ಪೊಳಲಿಯ ಶ್ರೀ ರಾಮಕೃಷ್ಣ ತಪೋವನದ ವತಿಯಿಂದ ಪಲ್ಲಿಪಾಡಿಯಲ್ಲಿ ನಿರ್ಮಾಣಗೊಳ್ಳಲಿರುವ ‘ರಾಮಕೃಷ್ಣ ವಿದ್ಯಾದೇಗುಲ’ ನೂತನ ಶಿಕ್ಷಣ ಸಂಸ್ಥೆಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ರಾಮಕೃಷ್ಣ ಮಠದ ಅನುಯಾಯಿಯಾದ ನಾನು ಮುಂದಿನ ಕಾರ್ಯಯೋಜನೆಗೆ ಸಂಪೂರ್ಣ ಸಹಕಾರವನ್ನು ನೀಡುವ ಭರವಸೆಯನ್ನು ನೀಡಿದರು.

ನಿಟ್ಟೆ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ವಿನಯ್ ಹೆಗ್ಡೆ, ಮಂಗಳೂರಿನ ರಾಮಕೃಷ್ಣ ಮಠದ ಸ್ವಾಮಿ ಜಿತಕಾಮಾನಂದ ಜೀ ಮಹಾರಾಜ್, ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್, ಮಾಜಿ ಸಚಿವ ರಮಾನಾಥ್ ರೈ, ಪಂಚಾಯತ್ ಸದಸ್ಯರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article