
Mangalore: ಶೇರು ಮಾರಾಟದ ಹೆಸರಿನಲ್ಲಿ ವಂಚನೆ
ಮಂಗಳೂರು: ಡಿಸ್ಕೌಂಟ್ ಬೆಲೆಗೆ ಶೇರು ಮಾರಾಟ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2024ರ ಮಾರ್ಚ್ ತಿಂಗಳ 23 ರಂದು ತನ್ನ ವಾಟ್ಸಪ್ ಖಾತೆಗೆ ಅಲಿಸ್- ಎಲ್.ಆರ್.ಸಿ ಎಂಬ ವಾಟ್ಸಪ್ ಗ್ರೂಪ್ ಲಿಂಕ್ ಬಂದಿದ್ದು, ಆ ಗೂಪಿಗೆ ಸೇರ್ಪಡೆಗೊಂಡ ಬಳಿಕ, ಷೇರು ಮಾರುಕಟ್ಟೆಯಲ್ಲಿ ಡಿಸ್ಕೌಂಟ್ ಬೆಲೆಗೆ ಷೇರುಗಳನ್ನು ಮಾರಾಟ ಮಾಡುವುದಾಗಿ ಪದೇ ಪದೇ ಮೆಸೆಜ್ ಬರುತ್ತಿದ್ದು, ಇದನ್ನು ನಂಬಿದ ವ್ಯಕ್ತಿ ಕಂಪೆನಿಯ ಖಾತೆಯಲ್ಲಿ ಹೂಡಿಕೆ ಮಾಡುವ ಸಲುವಾಗಿ ತನ್ನ ಬ್ಯಾಂಕ್ ಖಾತೆಗಳಿಂದ ಆರೋಪಿಗಳು ನೀಡಿದ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 17.57 ಲಕ್ಷ ರೂಪಾಯಿ ಹಣವನ್ನು ಹೂಡಿಕೆ ಮಾಡಿರುತ್ತಾರೆ ಎಂದು ದೂರಿನಲ್ಲಿತಿಳಿಸಲಾಗಿದೆ.
ಬಳಿಕ ಆರೋಪಿಗಳು ಇನ್ನೂ ಹೆಚ್ಚಿನ ಮೊತ್ತಕ್ಕೆ ಬೇಡಿಕೆ ಇಟ್ಟಿದ್ದು, ದೂರುದಾರರು ತಾನು ಜಮಾ ಮಾಡಿದ ಹಣ ತನ್ನ ಖಾತೆಗೆ ಮರು ಜಮಾ ಆಗದೆ ಇರುವುದರಿಂದ ತಾನು ಆರ್ಥಿಕ ವಂಚನೆಗೊಳಗಾದ ಬಗ್ಗೆ ತಿಳಿದು ಪೂಂಜಾಲಕಟ್ಟೆ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದಾರೆ. ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ನಡೆಯುತ್ತಿದೆ.