
Mangalore: ಮಂಗಳೂರಿನ ಸರ್ವತೋಮುಖ ಅಭಿವೃದ್ಧಿಗೆ ಜೊತೆಯಾಗೋಣ: ಕ್ಯಾ. ಬ್ರಿಜೇಶ್ ಚೌಟ
Friday, June 21, 2024
ಮಂಗಳೂರು: ಮಂಗಳೂರಿನ ಸರ್ವತೋಮುಖ ಅಭಿವೃದ್ಧಿಗೆ ಜೊತೆಯಾಗೋಣ ಎಂದು ಮಂಗಳೂರಿನ ನೂತನ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು.
ಜೂ.21 ರಂದು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ನೂತನವಾಗಿ ಸಂಸದರಾಗಿ ಆಯ್ಕೆಯಾಗಿದ್ದಕ್ಕಾಗಿ ಆಯೋಜಿಸಿದ ಸನ್ಮಾನವನ್ನು ಸ್ವೀಕರಿಸಿ ಬಳಿಕ ಅವರು ಮಾತನಾಡಿದರು.
ಮಂಗಳೂರಿನ ಯುದ್ಧ ಸ್ಮಾರಕವನ್ನು ಪಾಲಿಕೆಯ ವತಿಯಿಂದ ಅಭಿವೃದ್ಧಿಪಡಿಸಲು ಮಂಗಳೂರಿನ ಪ್ರಥಮ ಪ್ರಜೆ ಮತ್ತು ನಗರದ ಜನಪ್ರತಿನಿಧಿಗಳಿಗೆ ಸಭೆಯಲ್ಲಿ ಪ್ರಸ್ತಾಪ ಮಾಡಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದನಾಗಿ ಆಯ್ಕೆಯಾದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಅಭಿನಂದಿಸಿದರು.
ಮ.ನ.ಪಾ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಉಪಮೇಯರ್ ಸುನೀತಾ, ಸಚೇತಕರಾದ ಪ್ರೇಮಾನಂದ ಶೆಟ್ಟಿ, ಪ್ರತಿಪಕ್ಷ ನಾಯಕರಾದ ಪ್ರವೀಣ್ ಚಂದ್ರ ಆಳ್ವ, ಮ.ನ.ಪಾ ಆಯುಕ್ತ ಆನಂದ್, ಪಾಲಿಕೆಯ ಸ್ಥಾಯಿ ಸಮಿತಿಗಳ ಅಧ್ಯಕ್ಷ ಗಣೇಶ್ ಕುಲಾಲ್, ಲೋಹಿತ್ ಅಮೀನ್, ವರುಣ್ ಚೌಟ, ಭರತ್ಕುಮಾರ್, ವಿರೋಧ ಪಕ್ಷದ ನಾಯಕ ಪ್ರವೀಣಚಂದ್ರ ಆಳ್ವ, ಮ.ನ.ಪಾ. ಸದಸ್ಯರು ಮತು ಅಧಿಕಾರಿಗಳು ಉಪಸ್ಥಿತರಿದ್ದರು.