
Moodubidire: ಹೃದಯಾಘಾತದಿಂದ ಬಸ್ ಏಜೆಂಟ್ ಗಣೇಶ್ ನಿಧನ
Friday, June 28, 2024
ಮೂಡುಬಿದಿರೆ: ಕಳೆದ ಕೆಲವು ವರ್ಷಗಳಿಂದ ಮೂಡುಬಿದಿರೆಯಲ್ಲಿ ಬಸ್ ಏಜೆಂಟ್ ಆಗಿ ದುಡಿಯುತ್ತಿದ್ದ ಗಣೇಶ್ (45) ಅವರು ಶುಕ್ರವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಶುಕ್ರವಾರ ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ಮೂಡುಬಿದಿರೆ ಪೇಟೆಗೆ ಬಂದು ಪತ್ರಿಕೆ, ಹೂ ಇತ್ಯಾದಿಯನ್ನು ತೆಗೆದುಕೊಂಡು ಹೋಗಿದ್ದರು. ನಂತರ ಕಟೀಲು ದೇವಸ್ಥಾನಕ್ಕೆ ಹೋಗಿ ಬಂದ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಜಿ.ವಿ. ಪೈ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಅಲ್ಲಿ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ಗಣೇಶ್ ಅವರಿಗೆ ಕಳೆದ 20 ದಿನಗಳ ಹಿಂದೆ ಎದೆನೋವು ಕಾಣಿಸಿಕೊಂಡಿದ್ದು ಚಿಕಿತ್ಸೆಯ ನಂತರ ಅವರು ಸುಧಾರಿಸಿಕೊಂಡಿದ್ದರು.