Moodubidire: ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನಿಂದ ಸ್ಪೂರ್ತಿ ವಿಶೇಷ ಶಾಲೆಯ ಮಕ್ಕಳಿಗೆ ಪುಸ್ತಕ ವಿತರಣೆ
Thursday, June 6, 2024
ಮೂಡುಬಿದಿರೆ: ಇಲ್ಲಿನ ಅರಮನೆ ಬಾಗಿಲು ಬಳಿ ಇರುವ ಸ್ಫೂರ್ತಿ ವಿಶೇಷ ಶಾಲೆಯ ಮಕ್ಕಳಿಗೆ ಮಂಗಳೂರಿನ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ ) ಮಂಗಳೂರು ಇದರ ವತಿಯಿಂದ ರೂ 25000 ಮೌಲ್ಯದ ಪಠ್ಯ ಪುಸ್ತಕ, ಕಲಿಕಾ ಸಾಮಗ್ರಿಗಳು ಹಾಗೂ ಹೆಣ್ಣು ಮಕ್ಕಳಿಗಾಗಿ ಸಾನಿಟರಿ ಪ್ಯಾಡ್ ಬರ್ನಿಂಗ್ ಮಿಷನ್ ಅನ್ನು ಕೊಡುಗೆಯಾಗಿ ನೀಡಿದರು.
ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಮುಖ್ಯಸ್ಥರಾದ ಅರ್ಜುನ್ ಭಂಡಾರ್ಕರ್ ಆಂಡ್ ಭಾಗ್ಯಶ್ರೀ ಭಂಡಾರ್ಕರ್, ಸ್ಪೂರ್ತಿ ವಿಶೇಷ ಮಕ್ಕಳ ಶಾಲೆಯ ಸಂಸ್ಥಾಪಕ ಪ್ರಕಾಶ್ ಜೆ.ಶೆಟ್ಟಿಗಾರ್, ಶಾಲಾ ಮುಖ್ಯ ಶಿಕ್ಷಕಿ ಮತ್ತು ಸಿಬಂದಿ ವರ್ಗದವರು ಈ ಸಂದರ್ಭ ಉಪಸ್ಥಿತರಿದ್ದರು.