Ujire: ಜೂನ್ 22ರಂದು  ನಾರಾವಿ ಬಸದಿಯಲ್ಲಿ ಮಂಡಲ ಪೂಜೆ

Ujire: ಜೂನ್ 22ರಂದು ನಾರಾವಿ ಬಸದಿಯಲ್ಲಿ ಮಂಡಲ ಪೂಜೆ

ಉಜಿರೆ: ನಾರಾವಿ ಗ್ರಾಮದಲ್ಲಿರುವ ಭಗವಾನ್ ಶ್ರೀ ಧರ್ಮನಾಥಸ್ವಾಮಿ ಬಸದಿಯಲ್ಲಿ ಧಾಮಸಂಪ್ರೋಕ್ಷಣಾಪೂರ್ವಕ ಜಿನಬಿಂಬ ಪ್ರತಿಷ್ಠಾ ಮಹೋತ್ಸವದ 48ನೆ ದಿನವಾದ ಇದೇ ಜೂನ್ 22 ರಂದು ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿಭಟ್ಟಾರಕ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಮಂಡಲಪೂಜೆ ನಡೆಯಲಿದೆ.

ಜೂನ್ 22 ರಂದು ಪೂರ್ವಾಹ್ನ ಗಂಟೆ 6.45 ರಿಂದ ತೋರಣಮುಹೂರ್ತ, ವಿಮಾನಶುದ್ಧಿ, ಮುಖವಸ್ತ್ರ ಉದ್ಘಾಟನೆ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆಯಲಿವೆ.

ಪೂರ್ವಾಹ್ನ ಗಂಟೆ 9 ರಿಂದ ಸಾಮೂಹಿಕ ಜಿನಾಭಿಷೇಕ ಮತ್ತು ಋಷಿಮಂಡಲ ಆರಾಧನಾ ಪೂಜಾ ವಿಧಾನ ನಡೆಯಲಿದೆ. ಅಪರಾಹ್ನ ಗಂಟೆ 2.30 ರಿಂದ ಶ್ರೀ ಪದ್ಮಾವತಿದೇವಿ ಆರಾಧನೆ, ನೂತನ ಉಯ್ಯಾಲೆ ಸಮರ್ಪಣೆ ಮತ್ತು ಅಷ್ಟಾವಧಾನ ಪೂಜೆ ನಡೆಯುತ್ತದೆ.

ಧಾರ್ಮಿಕ ಸಭೆ: 

ಕಾರ್ಕಳ ಜೈನ ಮಠದ ಪೂಜ್ಯ ಲಲಿತಕೀರ್ತಿಭಟ್ಟಾರಕ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಸಂಜೆ ಏಳು ಗಂಟೆಯಿಂದ ಧಾರ್ಮಿಕಸಭೆ ನಡೆಯಲಿದೆ.

ಮೂಲ್ಕಿ ಸೀಮೆಯ ಅರಸರಾದ ಎಂ. ದುಗ್ಗಣ್ಣ ಸಾವಂತರು, ಮೂಡಬಿದ್ರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ ಜೈನ್ ಮತ್ತು ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಮುಖ್ಯ ಅತಿಥಿಗಳಾಗಿ ಶುಭಾಶಂಸನೆ ಮಾಡುವರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article