Ujire: ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗೆಡೆ ಅವರಿಂದ ಸಂವಾದ ಕಾರ್ಯಕ್ರಮ

Ujire: ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗೆಡೆ ಅವರಿಂದ ಸಂವಾದ ಕಾರ್ಯಕ್ರಮ


ಉಜಿರೆ: ಉಜಿರೆಯ ರುಡ್‌ಸೆಟ್ ಸಂಸ್ಥೆಗೆ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ರುಡ್‌ಸೆಟ್ ಸಂಸ್ಥೆಗಳ ಅಧ್ಯಕ್ಷ ಡಿ. ವೀರೇಂದ್ರ ಹೆಗ್ಗಡೆ ಅವರು ಭೇಟಿ ನೀಡಿ ಸಂಸ್ಥೆಯಲ್ಲಿ ನಡೆಯುತ್ತಿರುವ ತರಬೇತಿ ತಂಡಗಳ ಶಿಬಿರಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾರ್ಗದರ್ಶನ ನೀಡಿ, ರುಡ್‌ಸೆಟ್ ಸಂಸ್ಥೆಗಳ ತರಬೇತಿಯಲ್ಲಿ ಪ್ರಾಯೋಗಿಕ ತರಬೇತಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದ್ದರಿಂದ ಶಿಬಿರಾರ್ಥಿಗಳಿಗೆ ಹೆಚ್ಚು ಕೌಶಲ್ಯ ಪಡೆಯಲು ಸಾದ್ಯವಾಗುತ್ತದೆ ಎಂದು ತಿಳಿಸಿದರು.

ಇದರಿಂದ ಸ್ವಂತ ಉದ್ಯೋಗ ಪ್ರಾರಂಬಿಸಲು ಅನುಕೂಲವಾಗುತ್ತದೆ, ಇಲ್ಲಿನ ತರಬೇತಿ ಪಡೆದ ನಂತರವೂ ಹೊಸ ಹೊಸ ತಂತ್ರಜ್ಞಾನಗಳನ್ನು ನವೀಕರಿಸಿಕೊಳ್ಳಿ, ಹೊಸ ವಿನ್ಯಾಸಗಳನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸಿ ಹಾಗೂ ಉದ್ಯಮಿಗಳು ಲೆಕ್ಕಪತ್ರಗಳನ್ನು ಸರಿಯಾಗಿ ಇಟ್ಟುಕೊಂಡಾಗ ಲಾಭ ನಷ್ಟಗಳ ವಿವರ ದೊರೆಯುತ್ತದೆ ಎಂದು ಹೇಳಿದರು. ತರಬೇತಿ ಪಡೆದ ಎಲ್ಲರಿಗೂ ಶುಭ ಹಾರೈಸಿ ಆರ್ಶೀವದಿಸಿದರು. 

ಕೆನರಾ ಬ್ಯಾಂಕ್ ಪುತ್ತೂರು ಪ್ರಾದೇಶಿಕ ಕಚೇರಿಯ ಸಹಾಯಕ ಮಹಾ ಪ್ರಬಂಧಕ ರಂಜನ್ ಕುಮಾರ್, ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಕೆ.ಎನ್. ಜನಾರ್ಧನ್, ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ವಿಜಯ ಕುಮಾರ ಬಿ.ಪಿ. ಉಪಸ್ಥಿತರಿದ್ದರು. 

ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಎಮ್. ಸುರೇಶ್ ಸ್ವಾಗತಿಸಿ, ತರಬೇತಿಯ ಹಿನ್ನೋಟವನ್ನು ನೀಡಿದರು. ಹಿರಿಯ ಉಪನ್ಯಾಸಕರುಗಳಾದ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿ, ಕೆ. ಕರುಣಾಕರ ಜೈನ್ ವಂದಿಸಿದರು. ತರಬೇತಿಯಲ್ಲಿ ಒಟ್ಟು ೬೫ ಜನ ಅಭ್ಯರ್ಥಿಗಳನ್ನು ಭಾಗವಹಿಸಿದ್ದರು. ಕೆಲವು ಶಿಬಿರಾರ್ಥಿಗಳು ತರಬೇತಿಯ ಅನಿಸಿಕೆಯನ್ನು ವ್ಯಕ್ತಪಡಿಸಿದರು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article