Mangalore: ಜು.12 ರಂದು ಸಂಸದರ ಕಚೇರಿ ಉದ್ಘಾಟನೆ

Mangalore: ಜು.12 ರಂದು ಸಂಸದರ ಕಚೇರಿ ಉದ್ಘಾಟನೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರ ನೂತನ ಕಾರ್ಯಾಲಯವು ಜು.12 ರಂದು ಬೆಳಗ್ಗೆ 9.30ಕ್ಕೆ ಜಿಲ್ಲಾಧಿಕಾರಿ ಕಚೇರಿಯ 2ನೇ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ. 

ವಿಕಸಿತ ಭಾರತಕ್ಕಾಗಿ ವಿಕಸಿತ ದಕ್ಷಿಣ ಕನ್ನಡ ನಿರ್ಮಾಣದ ಸಂಕಲ್ಪಕ್ಕೆ ಈ ಕಾರ್ಯಾಲಯವು ಪ್ರೇರಣಾಧಾಮವಾಗಲಿದೆ. ಕ್ಷೇತ್ರದ ಕಟ್ಟ ಕಡೆಯ ವ್ಯಕ್ತಿಗೂ ಈ ಕಚೇರಿಯು ಸಹಕಾರಿಯಾಗಲಿದೆ. ಕ್ಷೇತ್ರದ ಜನರ ಮತ್ತು ಸಂಸದರ ನಡುವೆ ಕೊಂಡಿಯಾಗಿ ಕಚೇರಿಯು ಕಾರ್ಯನಿರ್ವಹಿಸಲಿದ್ದು, ಜಿಲ್ಲೆಯ ಜನರು ಕಚೇರಿಯನ್ನು ಸದುಪಯೋಗಪಡಿಸುವಂತೆ ಹಾಗೂ ಜಿಲ್ಲೆಯನ್ನು ಇನ್ನಷ್ಟು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ತಮ್ಮ ಸಹಕಾರವನ್ನು ನೀಡುವಂತೆ ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article