
Mangalore: ದಕ್ಷಿಣ ಕೊರಿಯಾದ ಸಚಿವರನ್ನು ಭೇಟಿ ಮಾಡಿದ ರಾಜ್ಯ ಸರ್ಕಾರದ ನಿಯೋಗ
Tuesday, July 2, 2024
ಮಂಗಳೂರು: ದಕ್ಷಿಣ ಕೊರಿಯಾ ಸರ್ಕಾರದ ವ್ಯಾಪಾರ, ಕೈಗಾರಿಕೆ ಮತ್ತು ಇಂಧನ ಸಚಿವ ಬೈಂಗ್ ನೇ ಯಾಂಗ್ ಅವರನ್ನು ರಾಜ್ಯ ಮಧ್ಯಮ ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ನೇತೃತ್ವದ ನಿಯೋಗ ಮಂಗಳವಾರ ಸಿಯೋಲ್ನಲ್ಲಿ ಭೇಟಿ ಮಾಡಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ, ರಾಜ್ಯ ಕೈಗಾರಿಕಾ ಪ್ರಧಾನ ಕಾರ್ಯದರ್ಶಿ ಸೆಲ್ವ ಕುಮಾರ್, ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.