
Ujire: ಉಜಿರೆ ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜಿನಲ್ಲಿ ಲೆಕ್ಕ ಪರಿಶೋಧಕರ ದಿನಾಚರಣೆ
Wednesday, July 3, 2024
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೆಶ್ವರ ಪದವಿ ಪೂರ್ವ ಕಾಲೇಜುನಲ್ಲಿ ಲೆಕ್ಕ ಪರಿಶೋಧಕರ ದಿನಾಚರಣೆಯನ್ನು ಆಚರಿಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಸಿ.ಎ ನಿರೀಕ್ಷಾ ಭಾಗವಹಿಸಿ ಮಾತನಾಡಿ, ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಲೆಕ್ಕ ಪರಿಶೋಧಕರ ಪಾತ್ರ ಬಹುಮುಖ್ಯ. ಸತತ ಪರಿಶ್ರಮದಿಂದ ವಿದ್ಯಾರ್ಥಿಗಳು ಲೆಕ್ಕ ಪರಿಶೋಧಕರ ಪರೀಕ್ಷೆಯನ್ನು ಪಾಸು ಮಾಡಬಹುದು ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಪ್ರಮೋದ್ ಕುಮಾರ್ ಶುಭ ಹಾರೈಸಿದರು. ವಿಭಾಗ ಮುಖ್ಯಸ್ಥೆ ಬೇಬಿ ಎನ್., ಉಪನ್ಯಾಸಕರು ಉಪಸ್ಥಿತರಿದ್ದರು. ವಿದ್ಯರ್ಥಿಗಳಾದ ಅನುಶ್ರೀ ಸ್ವಾಗತಿಸಿದರು. ಧಿಶಾಂಕ್ ವಂದಿಸಿ, ಪ್ರಿಯದರ್ಶಿನಿ ನಿರೂಪಿಸಿದರು.