ಟೋಲ್ ಗೇಟ್ ರದ್ದು ಮತ್ತು ಟೋಲ್ ಸ್ಥಾಪನೆ ಹುನ್ನಾರವನ್ನು ಖಂಡಿಸಿ ಆ.21 ರಂದು ಪ್ರತಿಭಟನೆ

ಟೋಲ್ ಗೇಟ್ ರದ್ದು ಮತ್ತು ಟೋಲ್ ಸ್ಥಾಪನೆ ಹುನ್ನಾರವನ್ನು ಖಂಡಿಸಿ ಆ.21 ರಂದು ಪ್ರತಿಭಟನೆ


ಕಾಪು: ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಟೋಲ್ ಗೇಟ್ ರದ್ದು ಮತ್ತು ಈ ರಸ್ತೆಯಲ್ಲಿ ಟೋಲ್ ಸ್ಥಾಪನೆ ಹುನ್ನಾರವನ್ನು ಖಂಡಿಸಿ, ಸರಕಾರದ ಗಮನ ಸೆಳೆಯುವ ಉದ್ದೇಶದೊಂದಿಗೆ ಆ.21 ರಂದು ಬೆಳಿಗ್ಗೆ 10 ಗಂಟೆಗೆ ಕಂಚಿನಡ್ಕದಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ.

ಕಾಪು ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೃಹತ್ ಪ್ರತಿಭಟನೆಯ ಬಳಿಕ ಆ.22 ರಂದು ಬೆಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಸಹಿತ ವಿವಿಧ ಸಚಿವರನ್ನೊಳಗೊಂಡ ನಿಯೋಗದೊಂದಿಗೆ ಮುಖ್ಯಮಂತ್ರಿಗಳ ಬಳಿ ತೆರಳಿ ಮನವಿ ಸಲ್ಲಿಸಲಾಗುವುದು ಎಂದರು.

ಪ್ರತಿಭಟನೆಗೆ ಸಾರ್ವಜನಿಕರ ಸಹಿತವಾಗಿ ಕಾಪು ಬ್ಲಾಕ್ ಕಾಂಗ್ರೆಸ್‌ನ ದಕ್ಷಿಣ ಮತ್ತು ಉತ್ತರ ವಿಭಾಗ, ಜಿಲ್ಲಾ ಕಾಂಗ್ರೆಸ್ ಮತ್ತು ಜಿಲ್ಲೆಯ ಎಲ್ಲಾ ಬ್ಲಾಕ್‌ಗಳ ಸಹಭಾಗಿತ್ವದೊಂದಿಗೆ ಈ ಪ್ರತಿಭಟನೆ ನಡೆಯಲಿದ್ದು ಈ ಮೂಲಕ ಸರಕಾರಕ್ಕೆ ಒತ್ತಡ ತರುವ ಪ್ರಯತ್ನ ನಡೆಸಲಾಗುವುದು ಎಂದರು.

ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯ ಶೇ.80 ರಷ್ಟು ರಸ್ತೆಯು ಕಾರ್ಕಳ ಭಾಗಕ್ಕೆ ಸೇರಿದೆ. ಯಡಿಯೂರಪ್ಪ ಸರಕಾರ ಇರುವಾಗ ಆರಂಭಗೊಂಡ ಪ್ರಕ್ರಿಯೆ ಇದಾಗಿದ್ದು ಬೆಳ್ಮಣ್‌ನಲ್ಲಿ ಟೋಲ್ ಹೋರಾಟಗಾರರ ಪ್ರತಿಭಟನೆಗೆ ಮಣಿದು ಬೊಮ್ಮಾಯಿ ಸರಕಾರ ಅದನ್ನು ಕಂಚಿನಡ್ಕಕ್ಕೆ ರವಾನಿಸಿದೆ. ಈಗ ಇಲ್ಲಿಂದಲೇ ಓಡಿಸುವ ಉದ್ದೇಶಕ್ಕಾಗಿ ಈ ಹೋರಾಟ ನಡೆಯಲಿದೆ ಎಂದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article