ಶೆಡ್ಡಿಗೆ ಪೊಲೀಸ್ ದಾಳಿ: ಉಲಾಯಿ-ಪಿದಾಯಿ ಆಟದಲ್ಲಿ ನಿರತರಾದ 23 ಮಂದಿಯ ಬಂಧನ

ಶೆಡ್ಡಿಗೆ ಪೊಲೀಸ್ ದಾಳಿ: ಉಲಾಯಿ-ಪಿದಾಯಿ ಆಟದಲ್ಲಿ ನಿರತರಾದ 23 ಮಂದಿಯ ಬಂಧನ


ಬಂಟ್ವಾಳ: ಮಾಲಾಡಿ ಗ್ರಾಮದ ಮಡಂತ್ಯಾರು ಪೇಟೆಯ ಬಳಿ ಶೆಡ್ಡೊಂದರ ಒಳಗೆ ನಡೆಯುತ್ತಿದ್ದ ಅಕ್ರಮ ಜೂಜಾಟ ಅಡ್ಡೆಗೆ ದಾಳಿ ನಡೆಸಿದ ಪೂಂಜಾಲಕಟ್ಟೆ ಪೊಲೀಸ್ ಠಾಣಾ ಪೊಲೀಸರು ದಾಳಿ ನಡೆಸಿ ಉಲಾಯಿ-ಪಿದಾಯಿಆಟದಲ್ಲಿ ನಿರತರಾಗಿದ್ದ 23 ಮಂದಿ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.

ಈ ಸಂದರ್ಭ ಜುಗಾರಿ ದಂಧೆ ನಡೆಸುತ್ತಿದ್ದಾತ ಪೊಲೀಸರ ಕೈಗೆ ಸಿಗದೆ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಪುಂಜಾಲಕಟ್ಟೆ ಠಾಣೆಯ ಪಿಎಸ್‌ಐ ನಂದಕುಮಾರ್ ನೇತೃತ್ವದ ಪೊಲೀಸರು ಖಚಿತ ವರ್ತಮಾನದ ಮೇರೆಗೆ ಈ ದಾಳಿ ಕಾರ್ಯಾಚರಣೆ ನಡೆಸಿದ್ದಾರೆ.

ಬಂಧತರಿಂದ ನಗದು ಸಹಿತ ಸುಮಾರು 36,729 ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article