ಶಿರೂರು ಗುಡ್ಡ ಕುಸಿತ ಪ್ರಕರಣ: ಲಾರಿ ಚಾಲಕನ ಮೃತದೇಹ ಪತ್ತೆ
Wednesday, September 25, 2024
ಕಾರವಾರ: ಉತ್ತರಕನ್ನಡ ಅಂಕೋಲಾದ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಹಾಗೂ ಅದರ ಚಾಲಕ ಅರ್ಜುನ್ ಅವರ ಮೃತದೇಹ ಪತ್ತೆಯಾಗಿದೆ.
ಕಳೆದ ಆರು ದಿನಗಳಿಂದ ನಿರಂತರವಾಗಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಇಂದು ಅರ್ಜುನ್ ಹಾಗೂ ಅವರ ಲಾರಿಯು ನದಿಯಲ್ಲಿ ಪತ್ತೆಯಾಗಿದೆ. ಈ ಸಂದರ್ಭ ಅರ್ಜುನ್ ಅವರ ಮೃತದೇಹ ಲಾರಿಯಲ್ಲೇ ಸಿಕ್ಕಿದೆ ಎಂದು ತಿಳಿದು ಬಂದಿದೆ.