ವಾಕಥಾನ್ನಲ್ಲಿ ರಥಬೀದಿಯ ಸರ್ಕಾರಿ ಕಾಲೇಜಿನ ರೆಡ್ಕ್ರಾಸ್ ಘಟಕದ ಸ್ವಯಂ ಸೇವಕರು ಭಾಗಿ
Saturday, September 21, 2024
ಮಂಗಳೂರು: ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕ ಮತ್ತು ಯುವ ರೆಡ್ಕ್ರಾಸ್ ಮಂಗಳೂರು ವಿಶ್ವವಿದ್ಯಾಲಯದ ವತಿಯಿಂದ ವಿಶ್ವ ಶಾಂತಿ ದಿನದ ಅಂಗವಾಗಿ ಶನಿವಾರ ಪಿಲಿಕುಳದಲ್ಲಿ ನಡೆದ ವಾಕಥಾನ್ನ ಸಮಾರೋಪ ಸಮಾರಂಭದಲ್ಲಿ ಮಂಗಳೂರಿನ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರೆಡ್ಕ್ರಾಸ್ ಘಟಕದ ಸ್ವಯಂ ಸೇವಕರು ಭಾಗವಹಿಸಿದರು. ಕಾಲೇಜಿನ ನೋಡಲ್ ಅಧಿಕಾರಿ ಡಾ. ಅಶೋಕ್ ಉಪಸ್ಥಿತರಿದ್ದರು.