ಕಾಸ್ಮೆಟಿಕ್ ಸರ್ಜರಿ ಯುವಕ ಸಾವು ಪ್ರಕರಣ: ಕ್ಲಿನಿಕ್‌ಗೆ ಬೀಗ ಹಾಕಿಸಿದ ಆರೋಗ್ಯ ಇಲಾಖೆ

ಕಾಸ್ಮೆಟಿಕ್ ಸರ್ಜರಿ ಯುವಕ ಸಾವು ಪ್ರಕರಣ: ಕ್ಲಿನಿಕ್‌ಗೆ ಬೀಗ ಹಾಕಿಸಿದ ಆರೋಗ್ಯ ಇಲಾಖೆ

ಮಂಗಳೂರು: ಕಾಸ್ಮೆಟಿಕ್ ಸರ್ಜರಿಗೆ ತೆರಳಿದ್ದ ಯುವಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ನಗರದ ಕಂಕನಾಡಿಯ ಬೆಂದೂರ್‌ವೆಲ್‌ನ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್‌ಪ್ಲೆಂಟ್ ಕ್ಲಿನಿಕನ್ನು ಆರೋಗ್ಯ ಇಲಾಖೆ ತಾತ್ಕಾಲಿಕವಾಗಿ ಬಂದ್ ಮಾಡಿದೆ.

ಕಾಸ್ಮೆಟಿಕ್ ಸರ್ಜರಿಗೆ ತೆರಳಿದ್ದ ಉಳ್ಳಾಲದ ಅಕ್ಕರೆಕೆರೆ ನಿವಾಸಿ ಮುಹಮ್ಮದ್ ಮಾಝಿನ್ ಮೃತಪಟ್ಟ ಘಟನೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನಿರ್ದೇಶನದಂತೆ ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ ಅವರು ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್‌ಪ್ಲೆಂಟ್ ಕ್ಲಿನಿಕನ್ನು  ಬಂದ್ ಮಾಡಿಸಿದ್ದಾರೆ. 

ಮುಹಮ್ಮದ್ ಮಾಝಿನ್ ಅವರಿಗೆ ಕಾಸ್ಮೆಟಿಕ್ ಸರ್ಜರಿಗೆ ಮುನ್ನ ಅರಿವಳಿಕೆ ನೀಡುವಾಗ ಎಸಗಿರುವ ನಿರ್ಲಕ್ಷ್ಯವೇ ಆತನ ಮೃತ್ಯುಗೆ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿರುವ ವರದಿ ವಿವಿಧ ಮಾಧ್ಯಮ, ಸಾಮಾಜಿಕ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಆರೋಗ್ಯ ಇಲಾಖೆಯು ಇದನ್ನು ಗಂಭೀರವಾಗಿ ಪರಿಗಣಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. 

ಮುಹಮ್ಮದ್ ಮಾಝಿನ್ ತನ್ನ ಎದೆಯ ಎಡಭಾಗದ ಸಣ್ಣ ಗುಳ್ಳೆಯನ್ನು ತೆಗೆಸಲು ಶನಿವಾರ ಬೆಳಗ್ಗೆ ಫ್ಲೋಂಟ್ ಕ್ಲಿನಿಕ್ಗೆ ತೆರಳಿದ್ದರು. ಆದರೆ ಅಲ್ಲಿ ಸರ್ಜರಿ ವೇಳೆ ವೈದ್ಯರ ನಿರ್ಲಕ್ಷ್ಯದ ಕಾರಣದಿಂದಾಗಿ ಮೃತಪಟ್ಟಿದ್ದರು ಎಂದು ದೂರಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article