'ಸಕ್ಷಮ’- ಆಳ್ವಾಸ್ ಮಹಿಳಾ ಸಂಘಟನೆಯ ಪದಗ್ರಹಣ-‘ಮಹಿಳೆಗೂ ಮುಕ್ತ ವಾತಾವರಣ ಅಗತ್ಯ’: ಶೋಭಾ ಎಸ್. ಹೆಗ್ಡೆ

'ಸಕ್ಷಮ’- ಆಳ್ವಾಸ್ ಮಹಿಳಾ ಸಂಘಟನೆಯ ಪದಗ್ರಹಣ-‘ಮಹಿಳೆಗೂ ಮುಕ್ತ ವಾತಾವರಣ ಅಗತ್ಯ’: ಶೋಭಾ ಎಸ್. ಹೆಗ್ಡೆ


ಮೂಡುಬಿದಿರೆ: ‘ಮಹಿಳೆಯರು ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ವ್ಯಕ್ತಪಡಿಸುವ ವೇದಿಕೆಗಳು ನಿರ್ಮಾಣಗೊಳ್ಳಬೇಕು’ ಎಂದು ಬಂಟರ ಮಹಿಳಾ ಸಂಘದ ಮೂಡುಬಿದಿರೆ ಘಟಕದ ಅಧ್ಯಕ್ಷೆ ಶೋಭಾ ಎಸ್. ಹೆಗ್ಡೆ ಹೇಳಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ) ವತಿಯಿಂದ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಶನಿವಾರ ಆಳ್ವಾಸ್ ಮಹಿಳಾ ಸಂಘಟನೆಯ ಪದಗ್ರಹಣ‘ 'ಸಕ್ಷಮ' ಸಮಾರಂಭವನ್ನು ಉದ್ಘಾಟಿಸಿ  ಮಾತನಾಡಿದರು.

ಪ್ರಸ್ತುತ ಸಮಾಜದಲ್ಲಿ ಮಹಿಳೆ ಹಲವಾರು ಸಮಸ್ಯೆಗಳನ್ನು ತೋರ್ಪಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದರೆ, ಇಂತಹ ವೇದಿಕೆಗಳ ಮೂಲಕ ಆಕೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಬೇಕು ಎಂದು ಅವರು ಆಶಿಸಿದರು.

 ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಾತನಾಡಿ,   ‘ಸಕ್ಷಮ’ವು ಮಹಿಳೆಯರಿಗೆ ಭಾವನಾತ್ಮಕ ಸಮಸ್ಯೆಗಳಿಗೂ ಪರಿಹಾರ ನೀಡುವ  ವೇದಿಕೆ ಆಗಬೇಕು. ವ್ಯಕ್ತಿತ್ವ ವೃದ್ಧಿಗೆ ವಿದ್ಯೆ, ಬುದ್ಧಿಯ ಜೊತೆ ಸುಂದರ ಮನಸ್ಸು ಕೂಡ ಅಗತ್ಯವಿದೆ ಎಂದರು.

ಜೀವನದಲ್ಲಿ ಪ್ರತಿ ಹೆಣ್ಣು ಅನೇಕ ರೀತಿಯ ಪಾತ್ರಗಳನ್ನು ಜವಾಬ್ದಾರಿಯಿಂದ ನಡೆಸಿಕೊಂಡು ಬಂದಿರುತ್ತಾಳೆ. ಹೆಣ್ಣಿನಲ್ಲಿ ಸಹಾನುಭೂತಿ ಮಾತ್ರವಲ್ಲದೇ ಕ್ರೀಡಾ, ದೇಶಿಯ ಮನೋಭಾವ ಮತ್ತು ಸೌಂದರ್ಯ ಪ್ರಜ್ಞೆ ರೂಪುಗೊಳ್ಳಬೇಕು. ಸಕ್ಷಮ ಇಂತಹ ವಿಚಾರಗಳ ಮೇಲೆ ಆದಷ್ಟು ಬೆಳಕು ಚೆಲ್ಲಲಿ ಎಂದರು.

 ಬಳಿಕ ‘ಸಕ್ಷಮ’ದ ನೂತನ ಪಧಾಧಿಕಾರಿಗಳಿಗೆ ಶಾಲು ಹಾಕಿ ಪದಗ್ರಹಣ ಮಾಡಿದರು. ‘ಸಕ್ಷಮ’ದ ಮಾಸಿಕ ಸುದ್ದಿ ಪತ್ರ ‘ಶಿರೋಸ್’ ಭಿತ್ತಿಪತ್ರವನ್ನು ಅನಾವರಣಗೊಳಿಸಲಾಯಿತು. ‘ಸಕ್ಷಮ’ದ ಮುಂದಿನ 6 ತಿಂಗಳ ಯೋಜನೆಗಳ ವರದಿಯನ್ನು ಸಕ್ಷಮ ಆಳ್ವಾಸ್ ಮಹಿಳಾ ಸಂಘಟನೆ ಅಧ್ಯಕ್ಷೆ ಡಾ ಮುಕಾಂಬಿಕ ವಾಚಿಸಿದರು.

ಸಕ್ಷಮ ಆಳ್ವಾಸ್ ಮಹಿಳಾ ಸಂಘಟನೆಯ ನೂತನ ಪದಾಧಿಕಾರಿಗಳು ನೇಮಕಗೊಂಡರು.  ಆಳ್ವಾಸ್ ಮಹಿಳಾ ಸಂಘಟನೆ ಅಧ್ಯಕ್ಷೆಯಾಗಿ ಡಾ. ಮುಕಾಂಬಿಕ, ಉಪಾಧ್ಯಕ್ಷೆಯಾಗಿ ಡಾ ಸುರೇಖಾ ಪೈ, ಕರ‍್ಯದರ್ಶಿ ಶಾಜಿಯಾ ಖಾನುಮ್, ಸಹ ಕಾರ‍್ಯದರ್ಶಿ ಡಾ. ದೀಪಾ ಕೊಠಾರಿ, ಖಚಾಂಚಿಯಾಗಿ ಡಾ. ಕ್ಯಾಥ್ರಿನ್ ನಿರ್ಮಲಾ ಜವಾಬ್ದಾರಿ ವಹಿಸಿಕೊಂಡರು.

ಸಕ್ಷಮ ರೂವಾರಿ ಗ್ರೀಷ್ಮಾ ಆಳ್ವ, ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಹಾಗೂ ಪ್ರಮುಖರು ಇದ್ದರು.

ಉಪನ್ಯಾಸಕಿ ರಶ್ಮಿನ್ ತನ್ವಿರ್ ಕಾರ್ಯಕ್ರಮ ನಿರೂಪಿಸಿ, ‘ಸಕ್ಷಮ’ ಕಾರ್ಯದರ್ಶಿ ಶಾಝಿಯಾ ಖಾನುಂ ವಂದಿಸಿದರು.





Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article