ಪಟಾಕಿ ದುರಂತ: ನಾಲ್ವರ ಸೆರೆ

ಪಟಾಕಿ ದುರಂತ: ನಾಲ್ವರ ಸೆರೆ


ಕಾಸರಗೋಡು: ಕಾಸರಗೋಡು ನೀಲೇಶ್ವರ ವಿರಾರ್ ಕಾವ್ ದೈವಸ್ಥಾನದ ಕಳಿಯಾಟ ಮಹೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಸುಡುಮದ್ದು ಸ್ಫೋಟಕ್ಕೆ ಸಂಬಂಧಪಟ್ಟಂತೆ ನಾಲ್ವರನ್ನು ನೀಲೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ದೇವಸ್ಥಾನ ಸಮಿತಿ ಅಧ್ಯಕ್ಷ ಚಂದ್ರಶೇಖರ, ಕಾರ್ಯದರ್ಶಿ ಭರತ್ ಮತ್ತು ಪಿ. ರಾಜೇಶ್ ಮತ್ತು ವಿಜಯನ್ ಬಂಧಿತರು.

ಪಟಾಕಿ ದುರಂತದಲ್ಲಿ 154 ಮಂದಿ ಗಾಯಗೊಂಡಿದ್ದು, ಈ ಪೈಕಿ ಎಂಟು ಮಂದಿಯ ಸ್ಥಿತಿ ಗಂಭೀರವಾಗಿದೆ. ದುರಂತದ ಬಗ್ಗೆ ತನಿಖೆಗೆ ವಿಶೇಷ ತಂಡ ರಚಿಸಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article