ಅತ್ಯಂತ ಹಿಂದುಳಿದ ಜಾತಿಯ ಕಾರ್ಯಕರ್ತನಿಗೆ ಟಿಕೇಟ್: ಎಲ್ಲರೂ ಸೇರೆ ಗೆಲ್ಲಿಸೋಣ: ಕ್ಯಾ. ಬ್ರಿಜೇಶ್ ಚೌಟ

ಅತ್ಯಂತ ಹಿಂದುಳಿದ ಜಾತಿಯ ಕಾರ್ಯಕರ್ತನಿಗೆ ಟಿಕೇಟ್: ಎಲ್ಲರೂ ಸೇರೆ ಗೆಲ್ಲಿಸೋಣ: ಕ್ಯಾ. ಬ್ರಿಜೇಶ್ ಚೌಟ


ಮಂಗಳೂರು: ಯುವ ನಾಯಕನಿಗೆ, ಅತ್ಯಂತ ಹಿಂದುಳಿದ ಜಾತಿಯ ಭಜಪಾ ಕಾರ್ಯಕರ್ತನಿಗೆ ಪಕ್ಷ ಟಿಕೆಟ್ ನೀಡಿದೆ, ನಾವೆಲ್ಲರೂ ಸೇರಿ ಕಿಶೋರ್ ಕುಮಾರ್ ಪುತ್ತೂರು ಅವರ ಗೆಲುವಿಗಾಗಿ ಶ್ರಮಿಸೋಣ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು.

ಅವರು ಇಂದು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಮಂಗಳೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆ ಅಸೈಗೋಳಿ ಬಂಟರ ಭವನದಲ್ಲಿ ಭಾಗವಹಿಸಿ ಮಾತನಾಡಿದರು.

ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಪಕ್ಷ ಸಂಘಟನೆಯ ಹಲವಾರು ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿರುವ ಸಮರ್ಥವಾದ ಅಭ್ಯರ್ಥಿಯನ್ನೇ ಬಿಜೆಪಿ ಇಂದು ವಿಧಾನ ಪರಿಷತ್ತಿನ ಉಪಚುನಾವಣೆಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿದೆ ಹಾಗೂ ನಾವೆಲ್ಲರೂ ಸೇರಿ ಕಿಶೋರ್ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸೋಣ ಎಂದರು.

ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಮಾತನಾಡಿ, ಬಾಲ್ಯದಿಂದಲೇ ಸ್ವಯಂ ಸೇವಕ ಸಂಘ, ಎಬಿವಿಪಿ, ಭರಂಗದಳ, ಯುವ ಮೋರ್ಚಾದದ ಮೂಲಕ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ನನಗೆ ಪಕ್ಷ ಇಂದು ಬಹುದೊಡ್ಡ ಜವಾಬ್ದಾರಿಯನ್ನು ನೀಡಿದೆ, ನಿಮ್ಮೆಲ್ಲರ ಸಹಕಾರದಿಂದ ಪಕ್ಷ ನನಗೆ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತೇನೆ ಎಂಬ ಆತ್ಮ ವಿಶ್ವಾಸವಿದೆ ಎಂದು ಹೇಳಿದರು.

ಚುನಾವಣಾ ಜಿಲ್ಲಾ ಸಂಚಾಲಕ ಕ್ಯಾ. ಗಣೇಶ್ ಕಾರ್ಣಿಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಆರ್ವಾರ್, ಪ್ರೇಮಾನಂದ ಶೆಟ್ಟಿ, ಮಂಡಲ ಅಧ್ಯಕ್ಷರಾದ ಜಗದೀಶ್ ಆಳ್ವ, ಬಂಟ್ವಾಳ ಚುನಾವಣಾ ಪ್ರಚಾರದ ಸಂಚಾಲಕರಾದ ದೇವದಾಸ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಧನಲಕ್ಷ್ಮೀ ಗಟ್ಟಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article