ಡಾ. ಅರುಣ್ ಉಳ್ಳಾಲ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು
Saturday, October 26, 2024
ಮಂಗಳೂರು: ಖಾಸಗಿ ಕಾರ್ಯಕ್ರಮದಲ್ಲಿ ಹಿಂದುಗಳು ಹೇಗಿರಬೇಕು ಎಂಬುದನ್ನು ಮಾತನ್ನಾಡಿದರು ಎಂಬ ಕಾರಣಕ್ಕೆ ಮಂಗಳೂರು ಪೊಲೀಸರು ಜಾಮೀನು ರಹಿತ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದರು, ನಂತರದ ದಿನಗಳಲ್ಲಿ ಹಿಂದು ಜಾಗರಣ ವೇದಿಕೆ, ವಿಶ್ವ ಹಿಂದು ಪರಿಷತ್ ಪತ್ರಿಕಾಗೋಷ್ಠಿ ನಡೆಸಿ ಖಂಡಿಸಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಂಗಳೂರಿನ ಜಿಲ್ಲಾ ನ್ಯಾಯಾಲಯ ಅರುಣ್ ಉಳ್ಳಾಲ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣವನ್ನು ಹಿಂದು ಜಾಗರಣ ವೇದಿಕೆಯ ಪ್ರಾಂತ ನ್ಯಾಯ ಜಾಗರಣ ಸಂಯೋಜಕ ಕಿಶೋರ್ ಕುಮಾರ್ ವಾದಿಸಿದರು.