ಶಕ್ತಿ ವಿದ್ಯಾರ್ಥಿಗಳು ಎಸ್‌ಜಿಎಫ್‌ಐ ರಾಷ್ಟ್ರೀಯ ಕ್ರೀಡಾ ಕೂಟಕ್ಕೆ ಅಯ್ಕೆ

ಶಕ್ತಿ ವಿದ್ಯಾರ್ಥಿಗಳು ಎಸ್‌ಜಿಎಫ್‌ಐ ರಾಷ್ಟ್ರೀಯ ಕ್ರೀಡಾ ಕೂಟಕ್ಕೆ ಅಯ್ಕೆ


ಮಂಗಳೂರು: ಶಕ್ತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಲಿಖಿತ್ ಎಸ್. ಸುವರ್ಣ ಮತ್ತು ಶಕ್ತಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಅಮೋಘ ವರ್ಷ ಇವರು ಮಧ್ಯಪ್ರದೇಶದ ದಿವಾಸ್‌ನಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಭಾಗವಹಿಸಿ ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದು, ಡಿಸೆಂಬರ್‌ನಲ್ಲಿ ನಡೆಯಲಿರುವ ಎಸ್‌ಜಿಎಫ್‌ಐ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್‌ಗೆ ಅಯ್ಕೆಯಾಗಿರುತ್ತಾರೆ ಹಾಗೂ ಶಕ್ತಿ ವಸತಿ ಶಾಲೆಯ ವಿವನ್ ಸಾಗರ್ ಶೆಟ್ಟಿ ಇವರು ಬೆಳ್ಳಿ ಪದಕವನ್ನು ಜಯಿಸಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ವಿಜೇತರನ್ನು ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ.ಸಿ. ನಾಕ್, ಕಾರ್ಯದರ್ಶಿ ಸಂಜಿತ್ ನಾಕ್, ಪ್ರಧಾನ ಸಲಹೆಗಾರ ರಮೇಶ್ ಕೆ., ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ ಮೂರ್ತಿ ಮತ್ತು ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಬಬಿತಾ ಸೂರಜ್ ಅಭಿನಂದಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article