
ದಕ್ಷಿಣ ಕನ್ನಡ ಜಿಲ್ಲಾ ಎನ್ಎಸ್ಯುಐ ವತಿಯಿಂದ ಗಾಂಧಿ ಜಯಂತಿಯ ಆಚರಣೆ
Wednesday, October 2, 2024
ಮಂಗಳೂರು: ಗಾಂಧಿ ಜಯಂತಿಯ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಎನ್ಎಸ್ಯುಐ ವತಿಯಿಂದ ಮಂಗಳೂರು ತಾಲೂಕಿನ ದೇರಳಕಟ್ಟೆಯ ‘ಸೇವಾಶ್ರಮ’ (ವೃದ್ದಾಶ್ರಮ)ದಲ್ಲಿ ಹಿರಿಯ ನಾಗರಿಕರೊಂದಿಗೆ ಆಚರಿಸಲಾಯಿತು, ಬೆಳಗ್ಗಿನ ಉಪಹಾರವನ್ನು ನೀಡಿ ಆಶೀರ್ವಾದವನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಸುಹಾನ್ ಆಳ್ವ, ರಾಜ್ಯ ಪ್ರಧಾನ ಕಾರ್ಯದರ್ಶಿ ಅನ್ವಿತ್ ಕಟೀಲ್, ಮಂಗಳೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಶಾಹಿಲ್ ಮಂಚಿ ಜಿಲ್ಲಾ ಉಪಾಧ್ಯಕ್ಷ ಕೀರ್ತನ್ ಗೌಡ ಕೊಡಪಾಲ, ಪ್ರಧಾನ ಕಾರ್ಯದರ್ಶಿ ಶೋಹನ್, ರೊನ್ಸ್ಟನ್, ಓಂಶ್ರೀ ಮತ್ತಿತರರು ಉಪಸ್ಥಿತರಿದ್ದರು.