ಅಗ್ನಿವೀರ ಪಡೆಯೊಂದಿಗೆ ಶಾಸಕ ಡಾಕ್ಟರ್ ಭಾರತ್ ಶೆಟ್ಟಿ ನೇತೃತ್ವದಲ್ಲಿ ಮಹಾತ್ಮಾ ಗಾಂಧಿ ಸಂಸ್ಮರಣೆ, ಸ್ವಚ್ಛತಾ ಅಭಿಯಾನ

ಅಗ್ನಿವೀರ ಪಡೆಯೊಂದಿಗೆ ಶಾಸಕ ಡಾಕ್ಟರ್ ಭಾರತ್ ಶೆಟ್ಟಿ ನೇತೃತ್ವದಲ್ಲಿ ಮಹಾತ್ಮಾ ಗಾಂಧಿ ಸಂಸ್ಮರಣೆ, ಸ್ವಚ್ಛತಾ ಅಭಿಯಾನ


ಕಾವೂರು: ರಾಷ್ಟ್ರಪಿತಾ ಮಹಾತ್ಮ ಗಾಂಧಿ ಹಾಗೂ ದೇಶದ ಪ್ರಸಿದ್ಧ ಪ್ರಧಾನಿಗಳಲ್ಲಿ ಓರ್ವರಾದ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಪ್ರಯುಕ್ತ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ದೇಶದ ಯೋಧರಾದ ಅಗ್ನಿವೀರ ಪಡೆಯೊಂದಿಗೆ ನಗರದ ಕೆಪಿಟಿ ಬಳಿಯ ಉದಯನಗರ ಸುತ್ತಮುತ್ತ ಸ್ವಚ್ಛತಾ ಅಭಿಯಾನ ನಡೆಸಿದರು.

ಇದೇ ಸಂದರ್ಭ ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಗೌರವ ಅರ್ಪಿಸಲಾಯಿತು.

ಈ ಸಂದರ್ಭ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸ್ವಚ್ಛತೆಯ ಪರಿಕಲ್ಪನೆಯೊಂದಿಗೆ ತಾವು ಅಧಿಕಾರ ಸ್ವೀಕರಿಸಿದ ಅವಧಿಯಿಂದ ದೇಶದಾದ್ಯಂತ ಹೊಸ ಕ್ರಾಂತಿಯಲ್ಲಿ ಮಾಡಿದ್ದಾರೆ. ದೇಶದ ಮೂಲೆ ಮೂಲೆಗಳಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಶಕ್ತಿಯನ್ನು ತುಂಬಿದ್ದಾರೆ. ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಕಳೆದ 15 ದಿನಗಳಿಂದ ಸೇವಾ ಪಾಕ್ಷಿಕ ಕಾರ್ಯಕ್ರಮದೊಂದಿಗೆ ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಸಿಕೊಂಡಿದ್ದಾರೆ. ಇಂದು ಉದಯ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸ್ಥಳೀಯ ಮಾನಪಾ ಸದಸ್ಯ ಜಯಾನಂದ ಅಂಚನ್ ಬಿಜೆಪಿಯ ಪದಾಧಿಕಾರಿಗಳು ಎಲ್ಲರೂ ಸೇರಿ ಸ್ವಚ್ಛತಾ ಅಭಿಯಾನವನ್ನು ನಡೆಸುತ್ತಿದ್ದಾರೆ. ದೇಶದ ಭದ್ರತಾ ಪಡೆಯನ್ನ ಬಲಿಷ್ಠ ಗೊಳಿಸುವ ನಿಟ್ಟಿನಲ್ಲಿ ಅಗ್ನಿವೀರ ಪಡೆಯನ್ನು ಪ್ರಧಾನಿ ಮೋದಿಯವರು ಆರಂಭಿಸಿದ್ದು ಅವರ ಒಂದು ತಂಡ ನಮ್ಮೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿರುವುದು ಶ್ಲಾಘನೀಯ ಎಂದು ಹೇಳಿದರು.

ಮಂಗಳೂರು ಉತ್ತರ ಮಂಡಲದ ಬಿಜೆಪಿ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಮಾಜಿ ಮೇಯರ್ ಜಯಾನಂದ ಅಂಚನ್, ಬಿಜೆಪಿ ಪ್ರಮುಖರಾದ ಪೂಜಾ ಪೈ, ರಣಧೀಪ್  ಕಾಂಚನ್ ಶಾನ್ ವಾಝ್ ಹುಸೈನ್, ರಮೇಶ್, ಮಂಡಲದ ಕಾರ್ಯಾಲಯದ ಕಾರ್ಯದರ್ಶಿ ಉಮೇಶ್ ಶೆಟ್ಟಿ ಹಾಗೂ ವಾರ್ಡಿನ ಅಧ್ಯಕ್ಷ ಹರಿಪ್ರಸಾದ್, ಪ್ರಧಾನ ಕಾರ್ಯದರ್ಶಿ ದಿವ್ಯ ಸುನಿಲ್ ಶಕ್ತಿ ಕೇಂದ್ರದ ಸದಸ್ಯೆ ಸರೋಜಿನಿ ಉಪಸ್ಥಿತರಿದ್ದರು.





Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article