ಗಾಯಕ, ಗುರು ಪದ್ಮಶೀ ಪಂಡಿತ್ ಎಂ. ವೆಂಕಟೇಶ್ ಕುಮಾರ್‌ಗೆ ಆಳ್ವಾಸ್ ವಿರಾಸತ್-2024 ಪ್ರಶಸ್ತಿ

ಗಾಯಕ, ಗುರು ಪದ್ಮಶೀ ಪಂಡಿತ್ ಎಂ. ವೆಂಕಟೇಶ್ ಕುಮಾರ್‌ಗೆ ಆಳ್ವಾಸ್ ವಿರಾಸತ್-2024 ಪ್ರಶಸ್ತಿ


ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಡಿಸೆಂಬರ್ 10ರಿಂದ 15ರವರೆಗೆ ನಡೆಯುವ ಆಳ್ವಾಸ್ ವಿರಾಸತ್-2024 ರಾಷ್ಟ್ರೀಯ ಸಾಂಸ್ಕೃತಿಕ ಸಮ್ಮೇಳನದಲ್ಲಿ ನೀಡುವ ಪ್ರಸಕ್ತ ವರ್ಷದ ಅಳ್ವಾಸ್ ವಿರಾಸತ್ ಪ್ರಶಸ್ತಿಗೆ ಹಿಂದೂಸ್ಥಾನಿ ಸಂಗೀತಲೋಕ ದಿಗ್ಗಜ ಗಾಯಕ ಮತ್ತು ಗುರು ಪದ್ಮಶ್ರೀ ಪುರಸ್ಕೃತ ಪಂಡಿತ್ ಎಂ. ವೆಂಕಟೇಶ್ ಕುಮಾರ್ ಆಯ್ಕೆಯಾಗಿದ್ದಾರೆ.

ಬಳ್ಳಾರಿಯ ಲಕ್ಷ್ಮಿಪುರದಲ್ಲಿ ಜನಿಸಿದ ವೆಂಕಟೇಶ್ ಕುಮಾರ್ ಅವರಿಗೆ ಜಾನಪದ ಗಾಯಕ ಮತ್ತು ತೊಗಲು ಬೊಂಬೆಯಾಟಗಾರರಾಗಿದ್ದ ತಂದೆ ಹುಲೆಗಪ್ಪನವರೇ ಮೊದಲ ಗುರುಗಳು. ಗುರು ಪುಟ್ಟರಾಜ ಗವಾಯಿಗಳಿಂದ ಗ್ವಾಲಿಯರ್ ಮತ್ತು ಕಿರಾಣಾ ಘರಾಣಾ ಶೈಲಿಯ ಎಲ್ಲಾ ಹೊಳಹುಗಳನ್ನು ಕಲಿತ ಅವರು ಕರ್ನಾಟಕ ಸಂಗೀತದಲ್ಲಿಯೂ ನಿಸ್ಸೀಮರು. 

ಭಕ್ತಿ ಸಂಗೀತದಲ್ಲಿ ಕನ್ನಡ ವಚನ ಮತ್ತು ದಾಸರಪದ ಗಾಯನಕ್ಕಾಗಿ ಇವರು ಪ್ರಸಿದ್ಧರು. ಉನ್ನತ ಪ್ರಶಸ್ತಿಗಳಾದ ಪದ್ಮಶ್ರೀ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜೋತ್ಸವ ಪ್ರಶಸ್ತಿ, ಕರ್ನಾಟಕ ಸಂಗೀತ ನಾಟ್ಯ ಅಕಾಡೆಮಿ ಪ್ರಶಸ್ತಿ, ಭೀಮಸೇನ ಜೋಶಿ ಪ್ರಶಸ್ತಿ, ಕಾಳಿದಾಸ ಪ್ರಶಸ್ತಿಗಳೇ ಮೊದಲಾದ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ತನ್ನ ಮಧುರವಾದ, ದೃಢವಾದ ಮತ್ತು ರೋಮಾಂಚಕ ಧ್ವನಿಯಿಂದ ಸಾಂಪ್ರದಾಯಿಕ ಮತ್ತು ಭಕ್ತಿ ಸಂಗೀತ ಕ್ಷೇತ್ರದಲ್ಲಿ ಇವರು ಆದ್ವಿತೀಯ ಪ್ರತಿಭೆ. ದೇಶ-ವಿದೇಶಗಳ ಪ್ರಮುಖ ಸಂಗೀತ ಕಛೇರಿಗಳಲ್ಲಿ ಭಾಗವಹಿಸಿದ ಹಿರಿಮೆ ವೆಂಕಟೇಶ್ ಕುಮಾರ್ ಅವರದ್ದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಡಾ. ಎಂ. ಮೋಹನ ಆಳ್ವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article