ಡಾ. ರಾ. ಶಿರೂರು ಅವರಿಗೆ ನಾಯಕ ರತ್ನ ರಾಜ್ಯಪ್ರಶಸ್ತಿ: ನಾಗರಾಜ ಟಿ.ಯು.

ಡಾ. ರಾ. ಶಿರೂರು ಅವರಿಗೆ ನಾಯಕ ರತ್ನ ರಾಜ್ಯಪ್ರಶಸ್ತಿ: ನಾಗರಾಜ ಟಿ.ಯು.


ಮೂಡುಬಿದಿರೆ: ಇಲ್ಲಿನ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಅವರನ್ನು ನಾಯಕ ರತ್ನ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು ಅಕ್ಟೋಬರ್ 26 ರಂದು ಬೆಂಗಳೂರಿನ ಶಿಕ್ಷಕರ ಸದನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು   ಎಚ್. ಕೆ.  ಮಂಜುನಾಥ ಒಡನಾಡಿಗಳ ಬಳಗ ಬೆಂಗಳೂರು ಈ ಸಂಘಟನೆಯ ಅಧ್ಯಕ್ಷ ಶ್ರೀ ನಾಗರಾಜ ಟಿ. ಯು. ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಸಾಹಿತ್ಯ, ಸಂಗೀತ, ಸಾಂಸ್ಕೃತಿಕ ಮತ್ತು ಶಿಕ್ಷಕ ಸಂಘಟನಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡ ಇವರಿಂದ ಇನ್ನಷ್ಟು ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ಮುಂದುವರೆಯಲಿ ಎಂದು ಸಂಸ್ಥೆಯ ಅಧ್ಯಕ್ಷ ನಾಗರಾಜ ಟಿ.ಯು. ಅವರು ಹಾರೈಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article