ಮೂಡುಬಿದಿರೆ ಪುರಸಭೆಗೆ ಸ್ವಚ್ಛತೆಯೇ ಸೇವೆ ಪುರಸ್ಕಾರ

ಮೂಡುಬಿದಿರೆ ಪುರಸಭೆಗೆ ಸ್ವಚ್ಛತೆಯೇ ಸೇವೆ ಪುರಸ್ಕಾರ


ಮೂಡುಬಿದಿರೆ: ನಗರಾಭಿವೃದ್ಧಿ ಇಲಾಖೆ,ಪೌರಾಡಳಿತ ನಿರ್ದೇಶನಾಲಯ ಹಾಗೂ ಜಿಲ್ಲಾಡಳಿತ,ದ.ಕ.ಜಿಲ್ಲೆ ಸ್ವಚ್ಛ ಭಾರತ್ ಮಿಷನ್ (ನಗರ) ವತಿಯಿಂದ ನಡೆದ ಸ್ವಚ್ಛತೆಯೇ ಸೇವೆ ಅಭಿಯಾನದ ಅಂಗವಾಗಿ ಉತ್ತಮವಾಗಿ ಕಾರ್ಯಕ್ರಮಗಳನ್ನು ನಡೆಸಿರುವ ಮೂಡುಬಿದಿರೆ ಪುರಸಭೆಗೆ ಮಂಗಳೂರಿನಲ್ಲಿಂದು ನಡೆದ ಕಾರ್ಯಕ್ರಮದಲ್ಲಿ 'ಸ್ವಚ್ಛತೆಯೇ ಸೇವೆ ಪುರಸ್ಕಾರ' ನೀಡಿ ಗೌರವಿಸಲಾಯಿತು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿ.ಪಂ. ಸಿ.ಇ.ಒ. ಆನಂದ್, ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಮತ್ತಿತರರು ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೂಡುಬಿದಿರೆ ಪುರಸಭಾ ಮುಖ್ಯಾಧಿಕಾರಿ ಇಂದು ಎಂ. ಅವರು ಪ್ರಶಸ್ತಿ ಸ್ವೀಕರಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article