ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿಗೆ ಆಯ್ಕೆ
Monday, October 7, 2024
ಉಡುಪಿ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ರಮಣಶ್ರೀ ಪ್ರತಿಷ್ಠಾನ ನೀಡುವ 2024ನೇ ಸಾಲಿನ ‘ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿ’ಗೆ ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ‘ಅಕ್ಕ ಕೇಳವ್ವ’ ಆಧುನಿಕ ವಚನಗಳ ಕೃತಿ ಪಾತ್ರವಾಗಿದೆ.
ಪ್ರಶಸ್ತಿ 20 ಸಾವಿರ ರೂ. ನಗದು ಒಳಗೊಂಡಿದೆ. ನ. 18ರಂದು ಬೆಂಗಳೂರಿನ ರಮಣಶ್ರೀ ಹೋಟೆಲ್ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರೊ. ನಿರಂಜನ ಚೋಳಯ್ಯ ಪ್ರಕಟಣೆ ತಿಳಿಸಿದೆ.